<p>ಬೆಳಗಾವಿ: ‘ಲೋಕಸಭೆ ಚುನಾವಣೆ ಪ್ರಚಾರಕ್ಕೆ ಬೆಳಗಾವಿಗೆ ಏಪ್ರಿಲ್ 27ರಂದು ಬರಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಾಲ್ಲೂಕಿನ ಕಾಕತಿ ಗ್ರಾಮದ ಐಟಿಸಿ ವೆಲ್ಕಮ್ ಹೋಟೆಲ್ನಲ್ಲಿ ತಂಗುವರು’. ಅವರ ವಾಸ್ತವ್ಯಕ್ಕೆ ಭರ್ಜರಿ ತಯಾರಿ ನಡೆದಿದೆ’ ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p>.<p>ವಿಶೇಷ ರಕ್ಷಣಾ ದಳ (ಎಸ್ಪಿಜಿ) ಸದಸ್ಯರು ಎಸ್ಪಿಜಿ ತಂಡದವರು ಬುಧವಾರ ಇಲ್ಲಿ ಸಭೆ ನಡೆಸಿ, ಭದ್ರತೆ ಮತ್ತು ಹೋಟೆಲ್ನಲ್ಲಿ ಇರುವ ಸೌಲಭ್ಯಗಳ ಕುರಿತು ಚರ್ಚಿಸಿದರು.</p>.<p>ರಾಷ್ಟ್ರೀಯ ಹೆದ್ದಾರಿ ಬಳಿಯಿರುವ ಈ ಹೋಟೆಲ್ ಐದು ಎಕರೆ ಜಾಗದಲ್ಲಿದೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರ ಪುತ್ರ ಬಸವಪ್ರಸಾದ ಜೊಲ್ಲೆ ಇದರ ಮಾಲೀಕರು.</p>.<p>‘ಶಿಷ್ಟಾಚಾರದಂತೆ ಪ್ರಧಾನಿ ವಾಸ್ತವ್ಯಕ್ಕೆ ಎಲ್ಲ ವ್ಯವಸ್ಥೆ ಮಾಡುತ್ತೇವೆ. ನಮಗೆ ಜವಾಬ್ದಾರಿ ಜೊತೆಗೆ ಖುಷಿಯೂ ಇದೆ. ಎಸ್ಪಿಜಿ ತಂಡದವರು ಈಗಾಗಲೇ ಹೋಟೆಲನ್ನು ಸುಪರ್ದಿಗೆ ಪಡೆದಿದ್ದಾರೆ’ ಎಂದು ಬಸವಪ್ರಸಾದ ಜೊಲ್ಲೆ ತಿಳಿಸಿದರು.</p>.<p>‘ಪ್ರಧಾನಿ 27ರ ರಾತ್ರಿ ಬೆಳಗಾವಿಯಲ್ಲಿ ವಾಸ್ತವ್ಯ ಮಾಡುವ ಸಂದೇಶ ಬಂದಿದೆ. ಎಸ್ಪಿಜಿ ತಂಡದವರು ಭದ್ರತೆ ವ್ಯವಸ್ಥೆ ನೋಡಿಕೊಳ್ಳುತ್ತಾರೆ. ಉಳಿದ ವ್ಯವಸ್ಥೆ ಆ ಪಕ್ಷದವರೇ ಮಾಡುತ್ತಾರೆ. ಭದ್ರತೆಗೆ ಜಿಲ್ಲಾಡಳಿತದಿಂದ ಸಹಕರಿಸುತ್ತೇವೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಲೋಕಸಭೆ ಚುನಾವಣೆ ಪ್ರಚಾರಕ್ಕೆ ಬೆಳಗಾವಿಗೆ ಏಪ್ರಿಲ್ 27ರಂದು ಬರಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಾಲ್ಲೂಕಿನ ಕಾಕತಿ ಗ್ರಾಮದ ಐಟಿಸಿ ವೆಲ್ಕಮ್ ಹೋಟೆಲ್ನಲ್ಲಿ ತಂಗುವರು’. ಅವರ ವಾಸ್ತವ್ಯಕ್ಕೆ ಭರ್ಜರಿ ತಯಾರಿ ನಡೆದಿದೆ’ ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p>.<p>ವಿಶೇಷ ರಕ್ಷಣಾ ದಳ (ಎಸ್ಪಿಜಿ) ಸದಸ್ಯರು ಎಸ್ಪಿಜಿ ತಂಡದವರು ಬುಧವಾರ ಇಲ್ಲಿ ಸಭೆ ನಡೆಸಿ, ಭದ್ರತೆ ಮತ್ತು ಹೋಟೆಲ್ನಲ್ಲಿ ಇರುವ ಸೌಲಭ್ಯಗಳ ಕುರಿತು ಚರ್ಚಿಸಿದರು.</p>.<p>ರಾಷ್ಟ್ರೀಯ ಹೆದ್ದಾರಿ ಬಳಿಯಿರುವ ಈ ಹೋಟೆಲ್ ಐದು ಎಕರೆ ಜಾಗದಲ್ಲಿದೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರ ಪುತ್ರ ಬಸವಪ್ರಸಾದ ಜೊಲ್ಲೆ ಇದರ ಮಾಲೀಕರು.</p>.<p>‘ಶಿಷ್ಟಾಚಾರದಂತೆ ಪ್ರಧಾನಿ ವಾಸ್ತವ್ಯಕ್ಕೆ ಎಲ್ಲ ವ್ಯವಸ್ಥೆ ಮಾಡುತ್ತೇವೆ. ನಮಗೆ ಜವಾಬ್ದಾರಿ ಜೊತೆಗೆ ಖುಷಿಯೂ ಇದೆ. ಎಸ್ಪಿಜಿ ತಂಡದವರು ಈಗಾಗಲೇ ಹೋಟೆಲನ್ನು ಸುಪರ್ದಿಗೆ ಪಡೆದಿದ್ದಾರೆ’ ಎಂದು ಬಸವಪ್ರಸಾದ ಜೊಲ್ಲೆ ತಿಳಿಸಿದರು.</p>.<p>‘ಪ್ರಧಾನಿ 27ರ ರಾತ್ರಿ ಬೆಳಗಾವಿಯಲ್ಲಿ ವಾಸ್ತವ್ಯ ಮಾಡುವ ಸಂದೇಶ ಬಂದಿದೆ. ಎಸ್ಪಿಜಿ ತಂಡದವರು ಭದ್ರತೆ ವ್ಯವಸ್ಥೆ ನೋಡಿಕೊಳ್ಳುತ್ತಾರೆ. ಉಳಿದ ವ್ಯವಸ್ಥೆ ಆ ಪಕ್ಷದವರೇ ಮಾಡುತ್ತಾರೆ. ಭದ್ರತೆಗೆ ಜಿಲ್ಲಾಡಳಿತದಿಂದ ಸಹಕರಿಸುತ್ತೇವೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>