‘ಚುನಾವಣಾ ಆಯೋಗದ ನಿರ್ದೇಶನದಂತೆ ಬೆಂಗಳೂರು ಚುನಾವಣಾಧಿಕಾರಿಯವರು ಮಾರ್ಚ್ 21ರಂದು ದೂರು ನೀಡಿದ್ದರು. ಎನ್ಸಿಆರ್ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿತ್ತು. ನ್ಯಾಯಾಲಯದ ನಿರ್ದೇಶನದಂತೆ, ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗೆ ನೋಟಿಸ್ ನೀಡಿ, ತನಿಖೆ ಮುಂದುವರಿಸಲಾಗುವುದು’ ಎಂದು ಪೊಲೀಸರು ಹೇಳಿದರು.