ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣಾ ಕ್ಷೇತ್ರದಲ್ಲಿ ಮಂಜುನಾಥ್ ಮತ್ತು ಸುರೇಶ್ ಹೆಸರಿನ ತಲಾ ಮೂವರು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ನಾಮಪತ್ರ ಸಲ್ಲಿಸಿದ್ದ ಮಂಜುನಾಥ್ ಹೆಸರಿನ ಒಟ್ಟು ಐವರು ಅಭ್ಯರ್ಥಿಗಳಲ್ಲಿ ಮೂವರು ಸೋಮವಾರ ನಾಮಪತ್ರ ವಾಪಸ್ ಪಡೆದರು. ಬಿಜೆಪಿಯ ಡಾ.ಸಿ.ಎನ್.ಮಂಜುನಾಥ್ ಮತ್ತು ಬಹುಜನ ಭಾರತ ಪಕ್ಷದ ಅಭ್ಯರ್ಥಿ ಸಿ.ಎನ್.ಮಂಜುನಾಥ ಕಣದಲ್ಲಿ ಉಳಿದು ಕೊಂಡಿದ್ದಾರೆ.
ಅದೇ ರೀತಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಸೇರಿದಂತೆ ನಾಮಪತ್ರ ಸಲ್ಲಿಸಿದ್ದ ಕರುನಾಡ ಪಾರ್ಟಿಯ ಸುರೇಶ್ ಎಸ್. ಮತ್ತು ಪಕ್ಷೇತರ ಅಭ್ಯರ್ಥಿ ಸುರೇಶ್ ಎಂ.ಎನ್. ಸೇರಿದಂತೆ ಎಲ್ಲ ಮೂವರು ಅಭ್ಯರ್ಥಿಗಳೂ ಕಣದಲ್ಲಿ ಉಳಿದುಕೊಂಡಿದ್ದಾರೆ.