‘ಬಹಿರಂಗ ಸಭೆಗಳಲ್ಲಿ ಗಲಾಟೆಗೆ ಕುಮ್ಮಕ್ಕು ನೀಡುವಂತೆ ಶಿವಕುಮಾರ್ ಮತ್ತು ಸಚಿವ ಕೆ.ಎನ್. ರಾಜಣ್ಣ ಭಾಷಣ ಮಾಡುತ್ತಿದ್ದಾರೆ. ಇದರಿಂದ ಪ್ರಚೋದನೆಗೆ ಒಳಗಾದ ಕಾಂಗ್ರೆಸ್ ಕಾರ್ಯಕರ್ತೆಯರು ಸೋಮವಾರದ ಸಭೆಯಲ್ಲಿ ದಾಂಧಲೆ ಮಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಗಲಾಟೆ ನಿಯಂತ್ರಿಸಲು ಕ್ರಮ ಕೈಗೊಂಡಿಲ್ಲ. ಮಹಿಳೆಯರು ದೇವೇಗೌಡರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ್ದರು. ಜೆಡಿಎಸ್, ಬಿಜೆಪಿ ಕಾರ್ಯಕರ್ತರೇ ಗೌಡರನ್ನು ರಕ್ಷಿಸಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.