<p><strong>ಧರ್ಮಪುರ:</strong> ‘ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿಗಳು ಮತದಾರರಲ್ಲಿ ಉತ್ಸಾಹ ಮೂಡಿಸಿವೆ. ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ’ ಎಂದು ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.</p>.<p>ಸಮೀಪದ ಖಂಡೇನಹಳ್ಳಿಯ ಶನೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಖಂಡೇಹಳ್ಳಿ ಪಾಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪರ ಮತಯಾಚನೆ ಮಾಡುವ ವೇಳೆ ಮಾತನಾಡಿದರು.</p>.<p>‘ರಾಜ್ಯದಲ್ಲಿ 25 ಬಿಜೆಪಿ ಸಂಸದರಿದ್ದರೂ ರಾಜ್ಯದ ಅಭಿವೃದ್ಧಿ ಬಗ್ಗೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಬಗ್ಗೆ ಚಕಾರವೆತ್ತಲಿಲ್ಲ. ರಾಜ್ಯದಲ್ಲಿ ಬರ ಪರಿಸ್ಥಿತಿ ಆವರಿಸಿದೆ. ₹ 18 ಸಾವಿರ ಕೋಟಿ ಬರ ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಯಾವ ರೀತಿಯ ಪರಿಹಾರ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ’ ಎಂದು ಹೇಳಿದರು.</p>.<p>ಮುಖಂಡರಾದ ಗೀತಾ ನಂದಿನಿಗೌಡ, ಯತೀಶ್, ಎಸ್.ಆರ್.ತಿಪ್ಪೇಸ್ವಾಮಿ, ಖಾದಿ ರಮೇಶ್, ತಿಮ್ಮಣ್ಣ, ನಾಗಪ್ಪ, ರಾಜಣ್ಣ, ಕೆ.ಪುಟ್ಟಸ್ವಾಮಿಗೌಡ, ಚಿದಾನಂದ, ಈಶ್ವರಪ್ಪ, ಸುಬ್ಬಣ್ಣ, ರಾಘವೇಂದ್ರ, ಕೃಷ್ಣ, ಹನುಮಂತರಾಯ ಉಪಸ್ಥಿತರಿದ್ದರು.</p>.<p><strong>‘ಬೆಳೆ ವಿಮೆ ವಿತರಣೆಯಲ್ಲಿ ತಾರತಮ್ಯ’</strong> </p><p>ಶೇಂಗಾ ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗಿದ್ದು ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ತಾರತಮ್ಯವಾಗಿದೆ. ಅಬ್ಬಿನಹೊಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ವಿಮೆ ಬಂದಿಲ್ಲ. ಖಂಡೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಒಂದು ಎಕರೆಗೆ ₹ 2000 ಜಮೆಯಾಗಿದೆ. ಬೇರೆ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಪ್ರತಿ ಎಕರೆಗೆ ₹ 15 ಸಾವಿರ ಜಮೆಯಾಗಿದ್ದು. ಅಧಿಕಾರಿಗಳು ತಾರತಮ್ಯ ಮಾಡಿದ್ದಾರೆ ಎಂದು ಖಂಡೇನಹಳ್ಳಿ ರೈತರು ಸಚಿವರ ಗಮನಕ್ಕೆ ತಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಪುರ:</strong> ‘ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿಗಳು ಮತದಾರರಲ್ಲಿ ಉತ್ಸಾಹ ಮೂಡಿಸಿವೆ. ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ’ ಎಂದು ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.</p>.<p>ಸಮೀಪದ ಖಂಡೇನಹಳ್ಳಿಯ ಶನೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಖಂಡೇಹಳ್ಳಿ ಪಾಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪರ ಮತಯಾಚನೆ ಮಾಡುವ ವೇಳೆ ಮಾತನಾಡಿದರು.</p>.<p>‘ರಾಜ್ಯದಲ್ಲಿ 25 ಬಿಜೆಪಿ ಸಂಸದರಿದ್ದರೂ ರಾಜ್ಯದ ಅಭಿವೃದ್ಧಿ ಬಗ್ಗೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಬಗ್ಗೆ ಚಕಾರವೆತ್ತಲಿಲ್ಲ. ರಾಜ್ಯದಲ್ಲಿ ಬರ ಪರಿಸ್ಥಿತಿ ಆವರಿಸಿದೆ. ₹ 18 ಸಾವಿರ ಕೋಟಿ ಬರ ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಯಾವ ರೀತಿಯ ಪರಿಹಾರ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ’ ಎಂದು ಹೇಳಿದರು.</p>.<p>ಮುಖಂಡರಾದ ಗೀತಾ ನಂದಿನಿಗೌಡ, ಯತೀಶ್, ಎಸ್.ಆರ್.ತಿಪ್ಪೇಸ್ವಾಮಿ, ಖಾದಿ ರಮೇಶ್, ತಿಮ್ಮಣ್ಣ, ನಾಗಪ್ಪ, ರಾಜಣ್ಣ, ಕೆ.ಪುಟ್ಟಸ್ವಾಮಿಗೌಡ, ಚಿದಾನಂದ, ಈಶ್ವರಪ್ಪ, ಸುಬ್ಬಣ್ಣ, ರಾಘವೇಂದ್ರ, ಕೃಷ್ಣ, ಹನುಮಂತರಾಯ ಉಪಸ್ಥಿತರಿದ್ದರು.</p>.<p><strong>‘ಬೆಳೆ ವಿಮೆ ವಿತರಣೆಯಲ್ಲಿ ತಾರತಮ್ಯ’</strong> </p><p>ಶೇಂಗಾ ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗಿದ್ದು ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ತಾರತಮ್ಯವಾಗಿದೆ. ಅಬ್ಬಿನಹೊಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ವಿಮೆ ಬಂದಿಲ್ಲ. ಖಂಡೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಒಂದು ಎಕರೆಗೆ ₹ 2000 ಜಮೆಯಾಗಿದೆ. ಬೇರೆ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಪ್ರತಿ ಎಕರೆಗೆ ₹ 15 ಸಾವಿರ ಜಮೆಯಾಗಿದ್ದು. ಅಧಿಕಾರಿಗಳು ತಾರತಮ್ಯ ಮಾಡಿದ್ದಾರೆ ಎಂದು ಖಂಡೇನಹಳ್ಳಿ ರೈತರು ಸಚಿವರ ಗಮನಕ್ಕೆ ತಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>