ಒಕ್ಕಲಿಗರ ಸಂಘದ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಗೌಡರು, ‘ಬಿಜೆಪಿಯಲ್ಲಿ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗಿದೆ. ಲಿಂಗಾಯತ ಸಮುದಾಯಕ್ಕೆ ಎಂಟು ಟಿಕೆಟ್ ನೀಡಲಾಗಿದೆ. ಒಕ್ಕಲಿಗ ಸಮುದಾಯದ ಇಬ್ಬರಿಗೆ ಮಾತ್ರ ಟಿಕೆಟ್ ನೀಡಲಾಗಿದೆ. ನಮ್ಮ ಸಮುದಾಯಕ್ಕೂ ಎಂಟು ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕು. ಸಿ.ಟಿ.ರವಿ, ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೊಟ್ಟಿಲ್ಲ. ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡೋಣ’ ಎಂದು ಹೇಳಿದ್ದಾಗಿ, ಮೂಲಗಳು ತಿಳಿಸಿವೆ.