<p><strong>ವಿಜಯಪುರ:</strong> ಕರ್ನಾಟಕದ ಜನತೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ವೋಟ್ ಹಾಕಿಲ್ಲ ಎಂಬ ಕಾರಣಕ್ಕೆ ಮೋದಿ, ಶಾ ಅವರಿಗೆ ನಮ್ಮ ರಾಜ್ಯದ ಮೇಲೆ ವಿಪರೀತ ಕೋಪ, ಅಸಡ್ಡೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.</p><p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಪ್ರತಿ ವಿಷಯದಲ್ಲೂ ಅನ್ಯಾಯ ಮಾಡುತ್ತಿದೆ ಎಂದು ಹೇಳಿದರು.</p><p>ರಾಜ್ಯದಲ್ಲಿ ಭೀಕರ ಬರ ತಲೆದೋರಿದ್ದರೂ ಕೇಂದ್ರ ಸರ್ಕಾರ ಬರ ಪರಿಹಾರ ನೀಡಿಲ್ಲ, ರಾಜ್ಯದ ಪಾಲಿನ ಜಿಎಸ್ಟಿ ನೀಡದೇ ಅನ್ಯಾಯ ಮಾಡಿದ್ದಾರೆ. ವಿಧಾನಸಭೆ ಚುನಾವಣೆಯ ಸೋಲಿನ ಅಘಾತದಿಂದ ಅವರಿನ್ನೂ ಹೊರಬಂದಿಲ್ಲ, ರಾಜಕೀಯ ದುರುದ್ದೇಶದಿಂದ ಕೇಂದ್ರ ಸರ್ಕಾರ ಹೀಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.</p><p>ದಕ್ಷಿಣ ಭಾರತದಲ್ಲಿ ರಾಜಕೀಯ ಅಸ್ವಿತ್ವ ಇಲ್ಲದ ಕಾರಣಕ್ಕೆ ಈ ಭಾಗದ ರಾಜ್ಯಗಳಿಗೆ ನಿರಂತರ ಅನ್ಯಾಯ ಮಾಡಲಾಗುತ್ತಿದೆ. ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿನ ಪಾಲು ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದರು.</p><p>ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಬಿಜೆಪಿ, ಜೆಡಿಎಸ್ನ 27 ಸಂಸತ್ ಸದಸ್ಯರು ಒಮ್ಮೆಯೂ ಕೇಂದ್ರ ಸರ್ಕಾರದ ಬಳಿ ಧ್ವನಿ ಎತ್ತಲಿಲ್ಲ. ನಮ್ಮ ರಾಜ್ಯದ ಹಿತಾಸಕ್ತಿ ಬಗ್ಗೆ ಧ್ವನಿ ಎತ್ತದೇ ಕಣ್ಣು ಮುಚ್ಚಿಕುಳಿತ ಒಬ್ಬರೂ ಈ ಬಾರಿ ಆಯ್ಕೆಯಾಗಬಾರದು. ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸಂಸದರು ಆಯ್ಕೆಯಾದರೆ ಅನುಕೂಲವಾಗಲಿದೆ ಎಂದರು.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ವಿದೇಶದಲ್ಲಿ ತೀರಿಕೊಂಡಾಗ ಕೇಂದ್ರ ಸರ್ಕಾರದಿಂದಾಗಲಿ, ಪ್ರಧಾನಿ ಮೋದಿಯಿಂದ ಯಾವುದೇ ಸಹಾಯ, ಸಹಕಾರ ಪಡೆದಿಲ್ಲ. ಕುಮಾರಸ್ವಾಮಿ ಅವರ ಹೇಳಿಕೆಯಲ್ಲಿ ಸತ್ಯವಿಲ್ಲ. ಈ ರೀತಿ ಆರೋಪ ಮಾಡಿದರೆ ಪ್ರಜ್ವಲ್ ವಿರುದ್ಧ ಟೀಕೆ ಮಾಡುವುದನ್ನು ನಿಲ್ಲಿಸಬಹುದು ಎಂಬ ಉದ್ದೇಶ ಅವರದಾಗಿದೆ ಎಂದರು.</p><p>ಬಿಜೆಪಿಯವರು ಮಹಿಳಾ ವಿರೋಧಿಗಳು. ಮಣಿಪುರದಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದಾಗ, ಹಾಸನದ ಪ್ರಕರಣದಲ್ಲಿ ನೊಂದಿರುವ ಮಹಿಳೆಯ ಪರ ಧ್ವನಿ ಎತ್ತದ ಅಮಿತ್ ಶಾ ಅವರ ಮಾತೃ ಶಕ್ತಿ ಎಲ್ಲಪ್ಪ ಹೋಯಿತು ಎಂದು ಪ್ರಶ್ನಿಸಿದರು.</p><p>ಮೋದಿ ಅವರು ಬೆಂಗಳೂರು ಬಾಂಬ್ ಸ್ಪೋಟದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಆದರೆ, ಅವರದೇ ಪಕ್ಷದ ಯಡಿಯೂರಪ್ಪ, ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದಾಗ ರಾಜ್ಯದಲ್ಲಿ ಒಟ್ಟು 6 ಬಾರಿ ಬಾಂಬ್ ಸ್ಟೋಟ ಆಗಿದೆ. ಈ ಬಗ್ಗೆ ಮೋದಿ ಅವರು ಏಕೆ ಬಾಯಿ ಬಿಡುತ್ತಿಲ್ಲ ಎಂದು ಪ್ರಶ್ನಿಸಿದರು.</p><p>ಮುಖಂಡರಾದ ಡಾ. ಮಹಾಂತೇಶ ಬಿರಾದಾರ, ಅಬ್ದುಲ್ ಹಮೀದ್ ಮುಶ್ರೀಫ್, ವಕೀಲ ಸುಭಾಶ ಛಾಯಗೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಕರ್ನಾಟಕದ ಜನತೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ವೋಟ್ ಹಾಕಿಲ್ಲ ಎಂಬ ಕಾರಣಕ್ಕೆ ಮೋದಿ, ಶಾ ಅವರಿಗೆ ನಮ್ಮ ರಾಜ್ಯದ ಮೇಲೆ ವಿಪರೀತ ಕೋಪ, ಅಸಡ್ಡೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.</p><p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಪ್ರತಿ ವಿಷಯದಲ್ಲೂ ಅನ್ಯಾಯ ಮಾಡುತ್ತಿದೆ ಎಂದು ಹೇಳಿದರು.</p><p>ರಾಜ್ಯದಲ್ಲಿ ಭೀಕರ ಬರ ತಲೆದೋರಿದ್ದರೂ ಕೇಂದ್ರ ಸರ್ಕಾರ ಬರ ಪರಿಹಾರ ನೀಡಿಲ್ಲ, ರಾಜ್ಯದ ಪಾಲಿನ ಜಿಎಸ್ಟಿ ನೀಡದೇ ಅನ್ಯಾಯ ಮಾಡಿದ್ದಾರೆ. ವಿಧಾನಸಭೆ ಚುನಾವಣೆಯ ಸೋಲಿನ ಅಘಾತದಿಂದ ಅವರಿನ್ನೂ ಹೊರಬಂದಿಲ್ಲ, ರಾಜಕೀಯ ದುರುದ್ದೇಶದಿಂದ ಕೇಂದ್ರ ಸರ್ಕಾರ ಹೀಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.</p><p>ದಕ್ಷಿಣ ಭಾರತದಲ್ಲಿ ರಾಜಕೀಯ ಅಸ್ವಿತ್ವ ಇಲ್ಲದ ಕಾರಣಕ್ಕೆ ಈ ಭಾಗದ ರಾಜ್ಯಗಳಿಗೆ ನಿರಂತರ ಅನ್ಯಾಯ ಮಾಡಲಾಗುತ್ತಿದೆ. ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿನ ಪಾಲು ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದರು.</p><p>ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಬಿಜೆಪಿ, ಜೆಡಿಎಸ್ನ 27 ಸಂಸತ್ ಸದಸ್ಯರು ಒಮ್ಮೆಯೂ ಕೇಂದ್ರ ಸರ್ಕಾರದ ಬಳಿ ಧ್ವನಿ ಎತ್ತಲಿಲ್ಲ. ನಮ್ಮ ರಾಜ್ಯದ ಹಿತಾಸಕ್ತಿ ಬಗ್ಗೆ ಧ್ವನಿ ಎತ್ತದೇ ಕಣ್ಣು ಮುಚ್ಚಿಕುಳಿತ ಒಬ್ಬರೂ ಈ ಬಾರಿ ಆಯ್ಕೆಯಾಗಬಾರದು. ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸಂಸದರು ಆಯ್ಕೆಯಾದರೆ ಅನುಕೂಲವಾಗಲಿದೆ ಎಂದರು.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ವಿದೇಶದಲ್ಲಿ ತೀರಿಕೊಂಡಾಗ ಕೇಂದ್ರ ಸರ್ಕಾರದಿಂದಾಗಲಿ, ಪ್ರಧಾನಿ ಮೋದಿಯಿಂದ ಯಾವುದೇ ಸಹಾಯ, ಸಹಕಾರ ಪಡೆದಿಲ್ಲ. ಕುಮಾರಸ್ವಾಮಿ ಅವರ ಹೇಳಿಕೆಯಲ್ಲಿ ಸತ್ಯವಿಲ್ಲ. ಈ ರೀತಿ ಆರೋಪ ಮಾಡಿದರೆ ಪ್ರಜ್ವಲ್ ವಿರುದ್ಧ ಟೀಕೆ ಮಾಡುವುದನ್ನು ನಿಲ್ಲಿಸಬಹುದು ಎಂಬ ಉದ್ದೇಶ ಅವರದಾಗಿದೆ ಎಂದರು.</p><p>ಬಿಜೆಪಿಯವರು ಮಹಿಳಾ ವಿರೋಧಿಗಳು. ಮಣಿಪುರದಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದಾಗ, ಹಾಸನದ ಪ್ರಕರಣದಲ್ಲಿ ನೊಂದಿರುವ ಮಹಿಳೆಯ ಪರ ಧ್ವನಿ ಎತ್ತದ ಅಮಿತ್ ಶಾ ಅವರ ಮಾತೃ ಶಕ್ತಿ ಎಲ್ಲಪ್ಪ ಹೋಯಿತು ಎಂದು ಪ್ರಶ್ನಿಸಿದರು.</p><p>ಮೋದಿ ಅವರು ಬೆಂಗಳೂರು ಬಾಂಬ್ ಸ್ಪೋಟದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಆದರೆ, ಅವರದೇ ಪಕ್ಷದ ಯಡಿಯೂರಪ್ಪ, ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದಾಗ ರಾಜ್ಯದಲ್ಲಿ ಒಟ್ಟು 6 ಬಾರಿ ಬಾಂಬ್ ಸ್ಟೋಟ ಆಗಿದೆ. ಈ ಬಗ್ಗೆ ಮೋದಿ ಅವರು ಏಕೆ ಬಾಯಿ ಬಿಡುತ್ತಿಲ್ಲ ಎಂದು ಪ್ರಶ್ನಿಸಿದರು.</p><p>ಮುಖಂಡರಾದ ಡಾ. ಮಹಾಂತೇಶ ಬಿರಾದಾರ, ಅಬ್ದುಲ್ ಹಮೀದ್ ಮುಶ್ರೀಫ್, ವಕೀಲ ಸುಭಾಶ ಛಾಯಗೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>