‘ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ’ ಎಂಬ ಮೋದಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ‘ಬಿಜೆಪಿ ಎಂದಿಗೂ ಸಂವಿಧಾನದ ಪರವಾಗಿಲ್ಲ. ಸಂವಿಧಾನ ಬದಲಾಯಿಸುತ್ತೇವೆ ಎಂದು ಸಂಸದ ಅನಂತ್ಕುಮಾರ್ ಹೆಗಡೆ ಹೇಳುತ್ತಲೇ ಇದ್ದರು. ಅವರ ಮೇಲೆ ಕ್ರಮ ಕೈಗೊಳ್ಳಲಿಲ್ಲವೇಕೆ? ಅವರು ಕೇಂದ್ರ ಸಚಿವರೂ ಆಗಿದ್ದರು. ಅವರನ್ನೇಕೆ ಸ್ಥಾನದಿಂದ ತೆಗೆಯಲಿಲ್ಲ. ಅವರು ಉತ್ತರಕನ್ನಡದಲ್ಲಿ ಏನೂ ಅಭಿವೃದ್ಧಿ ಕೆಲಸ ಮಾಡಿರಲಿಲ್ಲ. ಮನೆಯಲ್ಲೇ ಕುಳಿತಿದ್ದರು. ಚುನಾವಣೆ ಸಮಯದಲ್ಲಿ ಹೊರಗೆ ಬಂದಿದ್ದರು. ಸೋಲುತ್ತಾರೆಂದು ವರದಿ ಬಂದಿದ್ದರಿಂದಲೇ ಅವರಿಗೆ ಟಿಕೆಟ್ ಕೊಟ್ಟಿಲ್ಲ’ ಎಂದು ಟೀಕಿಸಿದರು.