ನವದೆಹಲಿ: ತೆರಿಗೆ ಪಾಲು ಹಾಗೂ ಬರ ಪರಿಹಾರ ನೀಡದೆ ಕೇಂದ್ರದ ಬಿಜೆಪಿ ಸರ್ಜಾರವು ಕರ್ನಾಟಕಕ್ಕೆ ಘೋರ ಅನ್ಯಾಯ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ರಾಜ್ಯದ ಬರಪೀಡಿತ ಜನರಿಗೆ ₹18,172 ಕೋಟಿ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡುತ್ತಿಲ್ಲ ಏಕೆ ಎಂದೂ ಪ್ರಶ್ನಿಸಿದೆ.
ಬರ ಪರಿಹಾರಕ್ಕಾಗಿ ಕರ್ನಾಟಕ ಸರ್ಕಾರವು ಸೆಪ್ಟೆಂಬರ್ನಲ್ಲಿ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಕೇಂದ್ರ ತಜ್ಞರ ತಂಡವು ನವೆಂಬರ್ನಲ್ಲಿ ವರದಿ ಸಲ್ಲಿಸಿದೆ. ಕೇಂದ್ರ ಸರ್ಕಾರವು ಡಿಸೆಂಬರ್ನಲ್ಲಿ ಹಣ ಬಿಡುಗಡೆ ಮಾಡಬೇಕಿತ್ತು. ಚುನಾವಣಾ ನೀತಿಸಂಹಿತೆ ಕಾರಣಕ್ಕೆ ಪರಿಹಾರ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ ಎಂದು ಕೇಂದ್ರ ಹಣಕಾಸು ಸಚಿವರು ಹೇಳಿದ್ದಾರೆ. ಇದೊಂದು ನೆಪ ಅಷ್ಟೇ. ಮೋದಿ ಸರ್ಕಾರದ ವಿಳಂಬ ನೀತಿಯಿಂದ ರಾಜ್ಯದ ಜನರಿಗೆ ಅನ್ಯಾಯವಾಗಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ದೂರಿದ್ದಾರೆ.