ಸತತ ಆರು ಸಲ ವಿಧಾನಸಭೆಗೆ ಆಯ್ಕೆಯಾದ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿ ಅಲ್ಲದೇ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಎರಡು ವರ್ಷಗಳಿಂದ ರಾಜಕೀಯ ಏಳು– ಬೀಳು ಅನುಭವಿಸಿದರು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ಅವರು ‘ಹೊರಗಿನ ಅಭ್ಯರ್ಥಿ’ ಎಂಬ ಅಪವಾದಕ್ಕೆ ಗುರಿಯಾಗಬೇಕಾಯಿತು. ಅದಕ್ಕೆ ಪ್ರತಿಯಾಗಿ ಅವರು, ‘ಹುಬ್ಬಳ್ಳಿ ನನ್ನ ಜನ್ಮಭೂಮಿ, ಬೆಳಗಾವಿ ನನ್ನ ಕರ್ಮಭೂಮಿ’ ಎಂದು ತಿರುಗೇಟು ನೀಡಿದರು.