<p><strong>ಶಿವಮೊಗ್ಗ:</strong> 'ಕೇಂದ್ರ ಗೃಹ ಸಚಿವ ಅಮಿತ್ ಶಾ ನನಗೆ ಕರೆ ಮಾಡಿ ದೆಹಲಿಗೆ ಬುಧವಾರ ಬರುವಂತೆ ಸೂಚಿಸಿದ್ದಾರೆ. ನಾನೂ ಹೋಗುತ್ತಿದ್ದೇನೆ' ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದರು.</p><p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ ಅಮಿತ್ ಶಾ ಕರೆ ಮಾಡಿದ್ದರು. ಹಿರಿಯ ನಾಯಕರು ಕರೆದಾಗ ಹೋಗಬೇಕಾಗುತ್ತದೆ ತಿಳಿಸಿದರು.</p><p>ಚುನಾವಣೆಗೆ ಸ್ಪರ್ಧೆ ಮಾಡುವುದು ಬೇಡ ಎಂದು ಅಮಿತ್ ಶಾ ನನಗೆ ಸಲಹೆ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡಿ ನಾಳೆಯೇ ಕಣದಿಂದ ಹಿಂದಕ್ಕೆ ಸರಿಯುವೆ ಎಂದು ಅವರಿಗೆ ಹೇಳಿದ್ದೇನೆ ಎಂಬುದಾಗಿ ತಿಳಿಸಿದರು.</p><p>ದೆಹಲಿಗೆ ಬಂದಾಗ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವಂತೆ ಸೂಚಿಸುವಂತಿಲ್ಲ ಎಂದು ಅಮಿತ್ ಶಾ ಅವರಿಗೆ ಹೇಳಿದ್ದೇನೆ.</p><p>ಚುನಾವಣೆಯಿಂದ ಹಿಂದಕ್ಕೆ ಸರಿಯುವುಂತೆ ಹೇಳಿದ್ದಾರೆ. ನೀವು ಸ್ಪರ್ಧೆ ಮಾಡುವುದು ಆಶ್ಚರ್ಯ ತಂದಿದೆ ಎಂದರು. ಅದಕ್ಕೆ ನಾನು ಕೂಡ ಸ್ಪಷ್ಟವಾಗಿ ಹೇಳಿದ್ದೇನೆ. ಕರ್ನಾಟಕದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷವಿದೆ. ಅದನ್ನು ಮುಕ್ತಿಗೊಳಿಸಬೇಕು. ರಾಜ್ಯ ಬಿಜೆಪಿಯಲ್ಲಿ ಕಾಂಗ್ರೆಸ್ ಸಂಸ್ಕೃತಿ ಬೆಳೆಯುತ್ತಿದೆ. ಅಪ್ಪ-ಮಕ್ಕಳ ಕೈಯಲ್ಲಿ ಪಕ್ಷ ಹೋಗಿರುವುದು ತುಂಬಾ ಅನ್ಯಾಯ. ಇದರಿಂದ ಕಾರ್ಯಕರ್ತರಿಗೆ ನೋವಾಗಿದೆ. ಅಪ್ಪ ಮಕ್ಕಳ ವಿರುದ್ಧ ಒಂದು ಪಕ್ಷದ ವ್ಯವಸ್ಥೆಯನ್ನು ಮುಕ್ತಿಗೊಳಿಸಬೇಕು ಎಂದು ಅವರಿಗೆ ತಿಳಿಸಿದ್ದೇನೆ ಎಂದರು.</p><p>ಹಿಂದುತ್ವದ ಪರವಾಗಿ ಹೋರಾಟ ಮಾಡುತ್ತಿರುವುದು ತಪ್ಪು ಎಂಬ ಕಲ್ಪನೆ ಮೂಡಿದೆ. ಹಿಂದುತ್ವಕ್ಕೆ ಸರಿಯಾದ ಬೆಲೆ ಸಿಗಬೇಕು ಎಂಬ ಉದ್ದೇಶವಿದೆ. ಹಿಂದುಳಿದವರಿಗೆ ಟಿಕೆಟ್ ಕೊಡುವುದಕ್ಕೆ ಆಗುತ್ತಿಲ್ಲ. ಹಿಂದುಳಿದವರಿಗೆ ಏಕೆ ಮೋಸ ಮಾಡುತ್ತಿದ್ದೀರಿ ಎಂಬುದನ್ನು ಅಮಿತ್ ಶಾ ಅವರ ಗಮಕ್ಕೆ ತಂದಿದ್ದೇನೆ ಎಂದು ತಿಳಿಸಿದರು.</p><p>ಹಿಂದುಳಿದವರ, ದಲಿತರ ಬಗ್ಗೆ ಮತ್ತು ಪಕ್ಷದಲ್ಲಿ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂಬ ಉದ್ದೇಶದಿಂದ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಶಾ ಅವರಿಗೆ ಹೇಳಿದ್ದೇನೆ ಎಂದರು.</p><p>ಪುತ್ರ ಕೆ.ಈ.ಕಾಂತೇಶನ ರಾಜಕೀಯ ಭವಿಷ್ಯದ ಬಗ್ಗೆಯೂ ಅಮಿತ್ ಪ್ರಸ್ತಾಪಿಸಿದರು. ಮಗನ ಜೊತೆ ಮಾತನಾಡಿಯೇ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವುದಾಗಿ ಹೇಳಿದರು.</p><p> ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದ್ರೆ ನಾನು ಚುನಾವಣೆಗೆ ನಿಲ್ಲುವುದಿಲ್ಲ. ನಾನು ದೆಹಲಿಗೆ ದೊಡ್ಡವರು ಕರೆದಾಗ ಹೋಗದೆ ಇರುವುದಕ್ಕೆ ಆಗೋದಿಲ್ಲ. ನನಗೆ ನೊಂದ ಕಾರ್ಯಕರ್ತರು ಬೆಂಬಲ ನೀಡುತ್ತಿದ್ದಾರೆ ಎಂದರು.</p><p>ಯಡಿಯೂರಪ್ಪ ಮತ್ತು ಅವರ ಮಕ್ಕಳು ಈ ಸಮಸ್ಯೆ ಇಲ್ಲೇ ಬಗೆಹರಿಯುತ್ತದೆ ಅಂದುಕೊಂಡಿದ್ದರು. ಅದು ಆಗದ ಕಾರಣ ಅಮಿತ್ ಶಾ ಈಗ ಫೋನ್ ಮಾಡಿದ್ದಾರೆ. ಯಡಿಯೂರಪ್ಪ ನಮ್ಮ ಮನೆಗೆ ಬರುತ್ತೇನೆ ಎಂದು ಹೇಳಿದ್ದರು. ಇನ್ನೂ ಬಂದಿಲ್ಲ ಎಂದು ಈಶ್ವರಪ್ಪ ತಿಳಿಸಿದರು.ಕೆ.ಎಸ್. ಈಶ್ವರಪ್ಪ</p>.ಕೆ.ಎಸ್. ಈಶ್ವರಪ್ಪ ಮುನಿಸು: ವರಿಷ್ಠರು ಎಲ್ಲ ಸರಿಪಡಿಸಲಿದ್ದಾರೆ ಎಂದ ವಿಜಯೇಂದ್ರ.ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ನಾಯಕರ ದೌಡು: ಮನವೊಲಿಕೆ ಯತ್ನ.ಲೋಕಸಭಾ ಚುನಾವಣೆ | ಕೆ.ಎಸ್. ಈಶ್ವರಪ್ಪ ಸ್ಪರ್ಧೆ ನಾಮಕಾವಸ್ತೆ: ಶಾಸಕ ಆರಗ.ರಾಜ್ಯ ಸರ್ಕಾರ ಯಾವುದೇ ಕ್ಷಣದಲ್ಲಾದರೂ ಪತನ ಆಗಬಹುದು: ಕೆ.ಎಸ್. ಈಶ್ವರಪ್ಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> 'ಕೇಂದ್ರ ಗೃಹ ಸಚಿವ ಅಮಿತ್ ಶಾ ನನಗೆ ಕರೆ ಮಾಡಿ ದೆಹಲಿಗೆ ಬುಧವಾರ ಬರುವಂತೆ ಸೂಚಿಸಿದ್ದಾರೆ. ನಾನೂ ಹೋಗುತ್ತಿದ್ದೇನೆ' ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದರು.</p><p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ ಅಮಿತ್ ಶಾ ಕರೆ ಮಾಡಿದ್ದರು. ಹಿರಿಯ ನಾಯಕರು ಕರೆದಾಗ ಹೋಗಬೇಕಾಗುತ್ತದೆ ತಿಳಿಸಿದರು.</p><p>ಚುನಾವಣೆಗೆ ಸ್ಪರ್ಧೆ ಮಾಡುವುದು ಬೇಡ ಎಂದು ಅಮಿತ್ ಶಾ ನನಗೆ ಸಲಹೆ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡಿ ನಾಳೆಯೇ ಕಣದಿಂದ ಹಿಂದಕ್ಕೆ ಸರಿಯುವೆ ಎಂದು ಅವರಿಗೆ ಹೇಳಿದ್ದೇನೆ ಎಂಬುದಾಗಿ ತಿಳಿಸಿದರು.</p><p>ದೆಹಲಿಗೆ ಬಂದಾಗ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವಂತೆ ಸೂಚಿಸುವಂತಿಲ್ಲ ಎಂದು ಅಮಿತ್ ಶಾ ಅವರಿಗೆ ಹೇಳಿದ್ದೇನೆ.</p><p>ಚುನಾವಣೆಯಿಂದ ಹಿಂದಕ್ಕೆ ಸರಿಯುವುಂತೆ ಹೇಳಿದ್ದಾರೆ. ನೀವು ಸ್ಪರ್ಧೆ ಮಾಡುವುದು ಆಶ್ಚರ್ಯ ತಂದಿದೆ ಎಂದರು. ಅದಕ್ಕೆ ನಾನು ಕೂಡ ಸ್ಪಷ್ಟವಾಗಿ ಹೇಳಿದ್ದೇನೆ. ಕರ್ನಾಟಕದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷವಿದೆ. ಅದನ್ನು ಮುಕ್ತಿಗೊಳಿಸಬೇಕು. ರಾಜ್ಯ ಬಿಜೆಪಿಯಲ್ಲಿ ಕಾಂಗ್ರೆಸ್ ಸಂಸ್ಕೃತಿ ಬೆಳೆಯುತ್ತಿದೆ. ಅಪ್ಪ-ಮಕ್ಕಳ ಕೈಯಲ್ಲಿ ಪಕ್ಷ ಹೋಗಿರುವುದು ತುಂಬಾ ಅನ್ಯಾಯ. ಇದರಿಂದ ಕಾರ್ಯಕರ್ತರಿಗೆ ನೋವಾಗಿದೆ. ಅಪ್ಪ ಮಕ್ಕಳ ವಿರುದ್ಧ ಒಂದು ಪಕ್ಷದ ವ್ಯವಸ್ಥೆಯನ್ನು ಮುಕ್ತಿಗೊಳಿಸಬೇಕು ಎಂದು ಅವರಿಗೆ ತಿಳಿಸಿದ್ದೇನೆ ಎಂದರು.</p><p>ಹಿಂದುತ್ವದ ಪರವಾಗಿ ಹೋರಾಟ ಮಾಡುತ್ತಿರುವುದು ತಪ್ಪು ಎಂಬ ಕಲ್ಪನೆ ಮೂಡಿದೆ. ಹಿಂದುತ್ವಕ್ಕೆ ಸರಿಯಾದ ಬೆಲೆ ಸಿಗಬೇಕು ಎಂಬ ಉದ್ದೇಶವಿದೆ. ಹಿಂದುಳಿದವರಿಗೆ ಟಿಕೆಟ್ ಕೊಡುವುದಕ್ಕೆ ಆಗುತ್ತಿಲ್ಲ. ಹಿಂದುಳಿದವರಿಗೆ ಏಕೆ ಮೋಸ ಮಾಡುತ್ತಿದ್ದೀರಿ ಎಂಬುದನ್ನು ಅಮಿತ್ ಶಾ ಅವರ ಗಮಕ್ಕೆ ತಂದಿದ್ದೇನೆ ಎಂದು ತಿಳಿಸಿದರು.</p><p>ಹಿಂದುಳಿದವರ, ದಲಿತರ ಬಗ್ಗೆ ಮತ್ತು ಪಕ್ಷದಲ್ಲಿ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂಬ ಉದ್ದೇಶದಿಂದ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಶಾ ಅವರಿಗೆ ಹೇಳಿದ್ದೇನೆ ಎಂದರು.</p><p>ಪುತ್ರ ಕೆ.ಈ.ಕಾಂತೇಶನ ರಾಜಕೀಯ ಭವಿಷ್ಯದ ಬಗ್ಗೆಯೂ ಅಮಿತ್ ಪ್ರಸ್ತಾಪಿಸಿದರು. ಮಗನ ಜೊತೆ ಮಾತನಾಡಿಯೇ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವುದಾಗಿ ಹೇಳಿದರು.</p><p> ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದ್ರೆ ನಾನು ಚುನಾವಣೆಗೆ ನಿಲ್ಲುವುದಿಲ್ಲ. ನಾನು ದೆಹಲಿಗೆ ದೊಡ್ಡವರು ಕರೆದಾಗ ಹೋಗದೆ ಇರುವುದಕ್ಕೆ ಆಗೋದಿಲ್ಲ. ನನಗೆ ನೊಂದ ಕಾರ್ಯಕರ್ತರು ಬೆಂಬಲ ನೀಡುತ್ತಿದ್ದಾರೆ ಎಂದರು.</p><p>ಯಡಿಯೂರಪ್ಪ ಮತ್ತು ಅವರ ಮಕ್ಕಳು ಈ ಸಮಸ್ಯೆ ಇಲ್ಲೇ ಬಗೆಹರಿಯುತ್ತದೆ ಅಂದುಕೊಂಡಿದ್ದರು. ಅದು ಆಗದ ಕಾರಣ ಅಮಿತ್ ಶಾ ಈಗ ಫೋನ್ ಮಾಡಿದ್ದಾರೆ. ಯಡಿಯೂರಪ್ಪ ನಮ್ಮ ಮನೆಗೆ ಬರುತ್ತೇನೆ ಎಂದು ಹೇಳಿದ್ದರು. ಇನ್ನೂ ಬಂದಿಲ್ಲ ಎಂದು ಈಶ್ವರಪ್ಪ ತಿಳಿಸಿದರು.ಕೆ.ಎಸ್. ಈಶ್ವರಪ್ಪ</p>.ಕೆ.ಎಸ್. ಈಶ್ವರಪ್ಪ ಮುನಿಸು: ವರಿಷ್ಠರು ಎಲ್ಲ ಸರಿಪಡಿಸಲಿದ್ದಾರೆ ಎಂದ ವಿಜಯೇಂದ್ರ.ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ನಾಯಕರ ದೌಡು: ಮನವೊಲಿಕೆ ಯತ್ನ.ಲೋಕಸಭಾ ಚುನಾವಣೆ | ಕೆ.ಎಸ್. ಈಶ್ವರಪ್ಪ ಸ್ಪರ್ಧೆ ನಾಮಕಾವಸ್ತೆ: ಶಾಸಕ ಆರಗ.ರಾಜ್ಯ ಸರ್ಕಾರ ಯಾವುದೇ ಕ್ಷಣದಲ್ಲಾದರೂ ಪತನ ಆಗಬಹುದು: ಕೆ.ಎಸ್. ಈಶ್ವರಪ್ಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>