<p><strong>ಬೆಂಗಳೂರು:</strong> ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತೀವ್ರ ನಿಗಾ ವಹಿಸಲಿದ್ದು, ಎಲ್ಲ 2,829 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗುವುದು. ಭದ್ರತೆಗಾಗಿ ಅರೆ ಸೇನಾಪಡೆಗಳ ಏಳು ತುಕಡಿಗಳನ್ನು ನಿಯೋಜಿಸಲಾಗುವುದು ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದರು.</p><p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಸ್ಥಳೀಯ ಚುನಾವಣಾಧಿಕಾರಿಗಳು ಮತ್ತು ವೀಕ್ಷಕರ ಕೋರಿಕೆ, ವರದಿ ಆಧರಿಸಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಅರೆ ಸೇನಾಪಡೆ ತುಕಡಿಗಳ ನಿಯೋಜನೆ ಎರಡು ಪಟ್ಟು ಇರಲಿದೆ' ಎಂದರು.</p><p>ಅರೆ ಸೇನಾಪಡೆ ನಿಯೋಜನೆಗೆ ಕೆಲವು ರಾಜಕೀಯ ಪಕ್ಷಗಳು ಮನವಿ ಮಾಡಿದ್ದವು. ಚುನಾವಣಾಧಿಕಾರಿಯೂ ವರದಿಯಲ್ಲಿ ಈ ಕುರಿತು ಮನವಿ ಮಾಡಿದ್ದರು. ಈ ಎಲ್ಲವನ್ನೂ ಆಧರಿಸಿ ವೆಬ್ ಕಾಸ್ಟಿಂಗ್ ಮತ್ತು ಭದ್ರತೆ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.</p><p>ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಎಲ್ಲ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗುವುದು ಎಂದರು.</p><p>ಮತಗಟ್ಟೆಯಲ್ಲಿನ ಪ್ರತಿ ಸೆಕೆಂಡ್ ಅವಧಿಯ ಬೆಳವಣಿಗೆಯು ವೆಬ್ ಕಾಸ್ಟಿಂಗ್ನಲ್ಲಿ ಲಭ್ಯವಾಗಲಿದೆ. ಕ್ಷೇತ್ರದ ಚುನಾವಣಾ ಅಧಿಕಾರಿ, ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮತ್ತು ಕೇಂದ್ರ ಚುನಾವಣಾ ಆಯೋಗವು ವೆಬ್ ಕಾಸ್ಟಿಂಗ್ ವೀಕ್ಷಿಸಲು ಅವಕಾಶ ಇದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತೀವ್ರ ನಿಗಾ ವಹಿಸಲಿದ್ದು, ಎಲ್ಲ 2,829 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗುವುದು. ಭದ್ರತೆಗಾಗಿ ಅರೆ ಸೇನಾಪಡೆಗಳ ಏಳು ತುಕಡಿಗಳನ್ನು ನಿಯೋಜಿಸಲಾಗುವುದು ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದರು.</p><p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಸ್ಥಳೀಯ ಚುನಾವಣಾಧಿಕಾರಿಗಳು ಮತ್ತು ವೀಕ್ಷಕರ ಕೋರಿಕೆ, ವರದಿ ಆಧರಿಸಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಅರೆ ಸೇನಾಪಡೆ ತುಕಡಿಗಳ ನಿಯೋಜನೆ ಎರಡು ಪಟ್ಟು ಇರಲಿದೆ' ಎಂದರು.</p><p>ಅರೆ ಸೇನಾಪಡೆ ನಿಯೋಜನೆಗೆ ಕೆಲವು ರಾಜಕೀಯ ಪಕ್ಷಗಳು ಮನವಿ ಮಾಡಿದ್ದವು. ಚುನಾವಣಾಧಿಕಾರಿಯೂ ವರದಿಯಲ್ಲಿ ಈ ಕುರಿತು ಮನವಿ ಮಾಡಿದ್ದರು. ಈ ಎಲ್ಲವನ್ನೂ ಆಧರಿಸಿ ವೆಬ್ ಕಾಸ್ಟಿಂಗ್ ಮತ್ತು ಭದ್ರತೆ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.</p><p>ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಎಲ್ಲ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗುವುದು ಎಂದರು.</p><p>ಮತಗಟ್ಟೆಯಲ್ಲಿನ ಪ್ರತಿ ಸೆಕೆಂಡ್ ಅವಧಿಯ ಬೆಳವಣಿಗೆಯು ವೆಬ್ ಕಾಸ್ಟಿಂಗ್ನಲ್ಲಿ ಲಭ್ಯವಾಗಲಿದೆ. ಕ್ಷೇತ್ರದ ಚುನಾವಣಾ ಅಧಿಕಾರಿ, ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮತ್ತು ಕೇಂದ್ರ ಚುನಾವಣಾ ಆಯೋಗವು ವೆಬ್ ಕಾಸ್ಟಿಂಗ್ ವೀಕ್ಷಿಸಲು ಅವಕಾಶ ಇದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>