ಮೈಸೂರು: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
ಅವರೊಂದಿಗೆ ತಾಯಿ ಪ್ರಮೋದಾದೇವಿ ಒಡೆಯರ್, ಶಾಸಕ ಟಿ.ಎಸ್. ಶ್ರೀವತ್ಸ ಸಾಥ್ ನೀಡಿದರು. ಮುಖಂಡರಾದ ರಘು ಮತ್ತು ಪ್ರದೀಪ್ಕುಮಾರ್ ಪಾಲ್ಗೊಂಡಿದ್ದರು.
‘ಶುಭ ಗಳಿಗೆ ಸಿಕ್ಕಿದ್ದರಿಂದ ಇಂದು ಒಂದು ಸೆಟ್ ನಾಮಪತ್ರ ಸಲ್ಲಿಸಲಾಯಿತು. ಏ.3ರಂದು ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನದ ಮೂಲಕ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ರಾಜ್ಯ ಮಟ್ಟದ ನಾಯಕರು ಬರಲಿದ್ದಾರೆ’ ಎಂದು ಪಕ್ಷದ ಮೂಲಗಳು ತಿಳಿಸಿವೆ.