<p><strong>ಹುಬ್ಬಳ್ಳಿ:</strong> ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯ ಗೋಕುಲ ರಸ್ತೆ ಬಳಿಯಿರುವ ಹೋಟೆಲ್ವೊಂದರ ಆವರಣದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಚಪ್ಪಲಿ ತೋರಿಸಿ ಕೈ ಕೈ ಮಿಲಾಯಿಸಿದರು.</p><p>ಹೋಟೆಲ್ನಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯುತಿತ್ತು. ‘ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೇಶಕ್ಕೆ ವಾಪಸ್ ಕರೆತರಬೇಕು’ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p><p>ಕೋರ್ ಕಮಿಟಿ ಸಭೆ, ಸುದ್ದಿಗೋಷ್ಠಿ ಮುಗಿಸಿಕೊಂಡು ಹೊರ ಬಂದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಮತ್ತು ಪ್ರತಿಭಟನಾನಿರತರು ಮುಖಾಮುಖಿಯಾದರು. ಆಗ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಯಿತು.</p><p>ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ‘ಗೋ ಬ್ಯಾಕ್ ಕುಮಾರಸ್ವಾಮಿ’ ಎಂದು ಕಾಂಗ್ರೆಸ್ನವರು ಘೋಷಣೆ ಕೂಗಿದರೆ, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಮುಖಂಡರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p><p>ಕೊನೆಗೆ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು, ವಾಹನದಲ್ಲಿ ಕರೆದೊಯ್ದರು.</p><p>ಘಟನೆ ಹಿನ್ನೆಲೆಯಲ್ಲಿ ಹೋಟೆಲ್ ಆವರಣದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.</p>.ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು.ಪ್ರಜ್ವಲ್ ರೇವಣ್ಣ ಗೆಲ್ಲಿಸಿದ್ದು ಯಾರು?: ಆರ್.ಅಶೋಕ.19 ಶಾಸಕರ ಭವಿಷ್ಯನಾ? ಪ್ರಜ್ವಲ್, ರೇವಣ್ಣನಾ?- ಶಾಸಕ ಸಮೃದ್ಧಿ ಮಂಜುನಾಥ್ ಪ್ರಶ್ನೆ.ಪ್ರಜ್ವಲ್ ಪ್ರಕರಣದ ಬಗ್ಗೆ ಬಿಜೆಪಿಯವರು ಮೌನ ಯಾಕೆ: ಪ್ರಿಯಾಂಕ ಖರ್ಗೆ ಪ್ರಶ್ನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯ ಗೋಕುಲ ರಸ್ತೆ ಬಳಿಯಿರುವ ಹೋಟೆಲ್ವೊಂದರ ಆವರಣದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಚಪ್ಪಲಿ ತೋರಿಸಿ ಕೈ ಕೈ ಮಿಲಾಯಿಸಿದರು.</p><p>ಹೋಟೆಲ್ನಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯುತಿತ್ತು. ‘ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೇಶಕ್ಕೆ ವಾಪಸ್ ಕರೆತರಬೇಕು’ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p><p>ಕೋರ್ ಕಮಿಟಿ ಸಭೆ, ಸುದ್ದಿಗೋಷ್ಠಿ ಮುಗಿಸಿಕೊಂಡು ಹೊರ ಬಂದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಮತ್ತು ಪ್ರತಿಭಟನಾನಿರತರು ಮುಖಾಮುಖಿಯಾದರು. ಆಗ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಯಿತು.</p><p>ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ‘ಗೋ ಬ್ಯಾಕ್ ಕುಮಾರಸ್ವಾಮಿ’ ಎಂದು ಕಾಂಗ್ರೆಸ್ನವರು ಘೋಷಣೆ ಕೂಗಿದರೆ, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಮುಖಂಡರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p><p>ಕೊನೆಗೆ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು, ವಾಹನದಲ್ಲಿ ಕರೆದೊಯ್ದರು.</p><p>ಘಟನೆ ಹಿನ್ನೆಲೆಯಲ್ಲಿ ಹೋಟೆಲ್ ಆವರಣದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.</p>.ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು.ಪ್ರಜ್ವಲ್ ರೇವಣ್ಣ ಗೆಲ್ಲಿಸಿದ್ದು ಯಾರು?: ಆರ್.ಅಶೋಕ.19 ಶಾಸಕರ ಭವಿಷ್ಯನಾ? ಪ್ರಜ್ವಲ್, ರೇವಣ್ಣನಾ?- ಶಾಸಕ ಸಮೃದ್ಧಿ ಮಂಜುನಾಥ್ ಪ್ರಶ್ನೆ.ಪ್ರಜ್ವಲ್ ಪ್ರಕರಣದ ಬಗ್ಗೆ ಬಿಜೆಪಿಯವರು ಮೌನ ಯಾಕೆ: ಪ್ರಿಯಾಂಕ ಖರ್ಗೆ ಪ್ರಶ್ನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>