<p><strong>ಬೆಂಗಳೂರು:</strong> ಒಂದೇ ಪ್ರದೇಶದಲ್ಲಿ ಮೂರಕ್ಕಿಂತ ಹೆಚ್ಚು ಮತಗಟ್ಟೆಗಳಿರುವ ಸ್ಥಳದಲ್ಲಿ ಮತದಾರರ ಸೇವಾ ಕೇಂದ್ರ ಮತ್ತು ಮತಗಟ್ಟೆಯ ಮಾಹಿತಿಯಿರುವ ನಿರ್ದೇಶನ ಫಲಕಗಳನ್ನು ಅಳವಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಸೂಚಿಸಿದರು.</p>.<p>ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿ 1,409 ಕಡೆ ಮೂರಕ್ಕಿಂತ ಹೆಚ್ಚು ಮತಗಟ್ಟೆಗಳಿವೆ. ಈ ಪ್ರದೇಶಗಳಲ್ಲಿ ಮತದಾರರ ಸೇವಾ ಕೇಂದ್ರ ಸ್ಥಾಪಿಸಬೇಕು. ಪಾರ್ಕಿಂಗ್ ಸೂಚನಾ ಫಲಕಗಳನ್ನು ಅಳವಡಿಸಿ, ಎಷ್ಟು ವಾಹನ ನಿಲ್ಲಿಸಬಹುದು ಎಂಬ ಮಾಹಿತಿ ಹಾಕಬೇಕು. ಮತದಾರರ ಸಹಾಯಕ್ಕಾಗಿ ಸ್ವಯಂ ಸೇವಕರನ್ನು ನಿಯೋಜಿಸಬೇಕು ಎಂದು ಹೇಳಿದರು.</p>.<p>ಮಾದರಿ ಮತಗಟ್ಟೆ: ಲೋಕಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಸಾಮಾನ್ಯ ಮತಗಟ್ಟೆಗಳ ಜೊತೆಗೆ ಸಖಿ(ಪಿಂಕ್), ಯುವ, ಥೀಮ್ ಆಧಾರಿತ, ಅಂಗವಿಕಲರ ಮಾದರಿ ಮತಗಟ್ಟೆಗಳನ್ನು ಅನುಷ್ಠಾನಗೊಳಿಸಲು ಸೂಚಿಸಿದರು.</p>.<p>ಮತಗಟ್ಟೆಗಳಲ್ಲಿ ಅಂಗವಿಕಲರಿಗೆ ಗಾಲಿ ಕುರ್ಚಿಗಳ ವ್ಯವಸ್ಥೆ, ಮೆಡಿಕಲ್ ಕಿಟ್ ಹಾಗೂ ಆಂಬುಲೆನ್ಸ್ ವ್ಯವಸ್ಥೆ ಇರಬೇಕು. ‘ಹೆಲ್ಪ್ ಡೆಸ್ಕ್’ಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಬೇಕೆಂದು ಎಂದು ತುಷಾರ್ ಗಿರಿನಾಥ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಒಂದೇ ಪ್ರದೇಶದಲ್ಲಿ ಮೂರಕ್ಕಿಂತ ಹೆಚ್ಚು ಮತಗಟ್ಟೆಗಳಿರುವ ಸ್ಥಳದಲ್ಲಿ ಮತದಾರರ ಸೇವಾ ಕೇಂದ್ರ ಮತ್ತು ಮತಗಟ್ಟೆಯ ಮಾಹಿತಿಯಿರುವ ನಿರ್ದೇಶನ ಫಲಕಗಳನ್ನು ಅಳವಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಸೂಚಿಸಿದರು.</p>.<p>ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿ 1,409 ಕಡೆ ಮೂರಕ್ಕಿಂತ ಹೆಚ್ಚು ಮತಗಟ್ಟೆಗಳಿವೆ. ಈ ಪ್ರದೇಶಗಳಲ್ಲಿ ಮತದಾರರ ಸೇವಾ ಕೇಂದ್ರ ಸ್ಥಾಪಿಸಬೇಕು. ಪಾರ್ಕಿಂಗ್ ಸೂಚನಾ ಫಲಕಗಳನ್ನು ಅಳವಡಿಸಿ, ಎಷ್ಟು ವಾಹನ ನಿಲ್ಲಿಸಬಹುದು ಎಂಬ ಮಾಹಿತಿ ಹಾಕಬೇಕು. ಮತದಾರರ ಸಹಾಯಕ್ಕಾಗಿ ಸ್ವಯಂ ಸೇವಕರನ್ನು ನಿಯೋಜಿಸಬೇಕು ಎಂದು ಹೇಳಿದರು.</p>.<p>ಮಾದರಿ ಮತಗಟ್ಟೆ: ಲೋಕಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಸಾಮಾನ್ಯ ಮತಗಟ್ಟೆಗಳ ಜೊತೆಗೆ ಸಖಿ(ಪಿಂಕ್), ಯುವ, ಥೀಮ್ ಆಧಾರಿತ, ಅಂಗವಿಕಲರ ಮಾದರಿ ಮತಗಟ್ಟೆಗಳನ್ನು ಅನುಷ್ಠಾನಗೊಳಿಸಲು ಸೂಚಿಸಿದರು.</p>.<p>ಮತಗಟ್ಟೆಗಳಲ್ಲಿ ಅಂಗವಿಕಲರಿಗೆ ಗಾಲಿ ಕುರ್ಚಿಗಳ ವ್ಯವಸ್ಥೆ, ಮೆಡಿಕಲ್ ಕಿಟ್ ಹಾಗೂ ಆಂಬುಲೆನ್ಸ್ ವ್ಯವಸ್ಥೆ ಇರಬೇಕು. ‘ಹೆಲ್ಪ್ ಡೆಸ್ಕ್’ಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಬೇಕೆಂದು ಎಂದು ತುಷಾರ್ ಗಿರಿನಾಥ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>