ರಾಜ್ಯದಲ್ಲಿ 223 ತಾಲ್ಲೂಕುಗಳಲ್ಲಿ ತೀವ್ರವಾದ ಬರಗಾಲ ಇದೆ. ಮುಂಗಾರು ಮಳೆಗಾಲವೂ ಸಮೀಪಿಸುತ್ತಿದೆ. ಆಯೋಗವು ನೀತಿಸಂಹಿತೆ ಸಡಿಲಿಕೆ ಮಾಡಿದರೆ ಬರ ನಿರ್ವಹಣೆ, ವಿಪತ್ತು ನಿರ್ವಹಣೆಗೆ ಸಿದ್ಧತೆ ಜತೆಗೆ ಅಭಿವೃದ್ಧಿ ಕಾಮಗಾರಿ ಹಾಗೂ ನೀತಿ ನಿರೂಪಣೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲು ರಾಜ್ಯ ಸರ್ಕಾರ ಯೋಚಿಸಿತ್ತು ಎಂದು ಮೂಲಗಳು ತಿಳಿಸಿವೆ.