ಪ್ರಕರಣವೇನು?: ಬಿ.ವೈ.ರಾಘವೇಂದ್ರ ಚಿತ್ರದುರ್ಗದ ಸಿದ್ದೇಶ್ವರ ಭೋವಿ ಸಮಾಜದ ಗುರುಪೀಠದಲ್ಲಿ 2024ರ ಮಾರ್ಚ್ 23ರಂದು ಬೆಳಗ್ಗೆ 11 ಗಂಟೆಯಲ್ಲಿ ಸಭೆ ನಡೆಸಿದ್ದರು. ‘ಈ ಸಭೆಗೆ ಚುನಾವಣಾ ಆಯೋಗದಿಂದ ಪೂರ್ವಾನುಮತಿ ಪಡೆದಿಲ್ಲ. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ, ಮತದಾರರ ಮೇಲೆ ಪ್ರಭಾವ ಬೀರಲು ಭಾಷಣ ಮಾಡಿ ಧಾರ್ಮಿಕ ಸ್ಥಳವನ್ನು ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ಆರೋಪಿಸಿ ಸಂಚಾರಿ ವಿಚಕ್ಷಣಾ ದಳದ ಅಧಿಕಾರಿ ಪಿ.ಅವಿನಾಶ್, ಗ್ರಾಮೀಣ ಠಾಣೆಯ ಪೊಲೀಸರಿಗೆ ಅಂದೇ ದೂರು ನೀಡಿದ್ದರು.