ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಕೆಟ್‌ ಕೈತಪ್ಪಲು ಸಿ.ಟಿ.ರವಿ ಕಾರಣ: ಬಿಜೆಪಿಗೆ ರಾಜೀನಾಮೆ ನೀಡಿದ ಕುಮಾರಸ್ವಾಮಿ

Last Updated 13 ಏಪ್ರಿಲ್ 2023, 5:41 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ನನಗೆ ಬಿಜೆಪಿ ಟಿಕೆಟ್‌ ಕೈತಪ್ಪಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತು ಅವರ ಪಟಾಲಂ ಷಡ್ಯಂತ್ರವೇ ಕಾರಣ’ ಎಂದು ಮೂಡಿಗೆರೆ ಮೀಸಲು ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ದೂರಿದರು.

‘ಪ್ರಜಾವಾಣಿ’ಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಅವರು, ‘ಪಕ್ಷದ ಕಚೇರಿಗೆ ರಾಜೀನಾಮೆ ಪತ್ರ ತಲುಪಿಸಿದ್ದೇನೆ. ಶಾಸಕ ಸ್ಥಾನದ ರಾಜೀನಾಮೆ ಪತ್ರವನ್ನು ಸ್ಪೀಕರ್‌ಗೆ ಫ್ಯಾಕ್ಸ್‌ ಕಳಿಸಿದ್ದೇನೆ’ ಎಂದು ತಿಳಿಸಿದರು.

‘ಮತದಾರರು ಮತ್ತು ಬೆಂಬಲಿಗರೊಮದಿಗೆ ಚರ್ಚಿಸಿ ಮುಂದಿನ ನಡೆ ನಿರ್ಧರಿಸುತ್ತೇನೆ’ ಎಂದು ಪ್ರತಿಕ್ರಿಯಿಸಿದರು.

ರಾಜೀನಾಮೆ ಪತ್ರದಲ್ಲಿ ಏನಿದೆ?
‘ಪಕ್ಷದಲ್ಲಿನ ಬೆಳವಣಿಗೆಗಳಿಂದ ಬೇಸತ್ತು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ಕೋರಿಕೆಯನ್ನು ಅಂಗೀಕರಿಸಬೇಕಾಗಿ ವಿನಂತಿ’ ಎಂದು ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT