ತಮ್ಮ ತವರು ಜಿಲ್ಲೆಯ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ, ಪಕ್ಷದ ಅಭ್ಯರ್ಥಿಗಳಾದ ಎಂ. ಲಕ್ಷ್ಮಣ್ ಮತ್ತು ಸುನಿಲ್ ಬೋಸ್ ಪರ ಮತ ಯಾಚಿಸಲಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅವರು, ಪಕ್ಷದ ಸ್ಥಳೀಯ ನಾಯಕರ ಜೊತೆ ಸಭೆ ನಡೆಸಿ ಕಾರ್ಯತಂತ್ರ ರೂಪಿಸಲಿದ್ದಾರೆ.