<p><strong>ಮೈಸೂರು</strong>: ‘ಕಾಂಗ್ರೆಸ್, ಲೋಕಸಭಾ ಚುನಾವಣೆಯ ಪ್ರಣಾಳಿಕೆ ರೂಪಿಸಲು ನಗರ ನಕ್ಸಲರ ಸಹಾಯ ಪಡೆದಿದೆ’ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಆರೋಪಿಸಿದರು.</p><p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಜಾತಿ, ಪ್ರಾದೇಶಿಕತೆ, ಮತೀಯವಾದದ ಮೂಲಕ ದೇಶ ವಿಭಜಿಸುವ ರೋಗ ಸ್ವಾತಂತ್ರ್ಯ ಬಂದು 75 ವರ್ಷವಾದರೂ ಕಾಂಗ್ರೆಸ್ಗೆ ಹೋಗಿಲ್ಲ’ ಎಂದರು.</p><p>‘ನರೇಂದ್ರ ಮೋದಿ ಸರ್ಕಾರವು ಕಳೆದ 10 ವರ್ಷದಲ್ಲಿ ರಾಜ್ಯಕ್ಕೆ ₹ 4.91 ಲಕ್ಷ ಕೋಟಿ ಅನುದಾನ ನೀಡಿದೆ. ಯುಪಿಎ ಅವಧಿಯಲ್ಲಿ ₹1.42 ಲಕ್ಷ ಕೋಟಿ ನೀಡಲಾಗಿತ್ತು. ಇದು ಸುಳ್ಳೆಂದು ಚಾಮುಂಡೇಶ್ವರಿ ಮುಂದೆ ಸಿದ್ದರಾಮಯ್ಯ ಪ್ರಮಾಣ ಮಾಡಲಿ’ ಎಂದು ಸವಾಲು ಹಾಕಿದರು.</p><p>‘ಬಹಿರಂಗ ಚರ್ಚೆಯಲ್ಲಿ 2004–14ರ ಅವಧಿಯಲ್ಲಿ ನಡೆಸಿರುವ ಹಗರಣಗಳ ಚರ್ಚೆಯನ್ನೂ ನಡೆಸಲಿ. ರಾಜ್ಯಕ್ಕೆ ಅನುದಾನ ಹಂಚಿಕೆ ಕುರಿತ ಎಲ್ಲ ಪ್ರಶ್ನೆಗಳಿಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ಉತ್ತರ ನೀಡಿದ್ದಾರೆ. ಸಿದ್ದರಾಮಯ್ಯ ಅವರು ದೃಷ್ಟಿದೋಷ ನಿವಾರಿಸಿಕೊಳ್ಳಲಿ’ ಎಂದರು.</p><p>‘ಬರಪರಿಹಾರ ನಿಧಿಯನ್ನು ಬಿಜೆಪಿ ಆಡಳಿತವಿರುವ ಅಸ್ಸಾಂ, ಮಹಾರಾಷ್ಟ್ರಕ್ಕೂ ನೀಡಿಲ್ಲ. ನೀತಿ ಸಂಹಿತೆ ಮುಗಿದ ನಂತರ ಅನುದಾನ ಬಿಡುಗಡೆಯಾಗಲಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ಕಾಂಗ್ರೆಸ್ ಕೋಮುವಾದಿಯಾಗಿ ಬದಲಾಗಿದೆ. ಜನರ ನಂಬಿಕೆ ಕಳೆದುಕೊಂಡಿದ್ದು ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ. ಬಿಜೆಪಿಯು ರಾಜ್ಯದ 28 ಕ್ಷೇತ್ರಗಳಲ್ಲದೇ ನೆರೆಯ ತಮಿಳುನಾಡಿನಲ್ಲೂ ಗೆಲುವು ದಾಖಲಿಸಲಿದೆ. ಅಲ್ಲಿ ಪರ್ಯಾಯ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಲಿದೆ’ ಎಂದು ಹೇಳಿದರು. </p><p><strong>‘ಒಕ್ಕಲಿಗರು ರಾಷ್ಟ್ರವಾದಿಗಳು</strong>’: ‘ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಒಕ್ಕಲಿಗರೆಂದು ಹೇಳಿಕೊಂಡು ಮತ ಕೇಳುತ್ತಿದ್ದಾರೆ. ಅವರನ್ನು ಅವರ ಪಕ್ಷದವರೇ ಲೂಸ್ ಟಾಕರ್ ಎಂದು ಕರೆಯುತ್ತಾರೆ. ಒಕ್ಕಲಿಗ ಸಮುದಾಯವು ರಾಷ್ಟ್ರವಾದಿಯಾಗಿದ್ದು, ಲಕ್ಷ್ಮಣ್ಗೆ ಮತ ಕೊಡುವುದಿಲ್ಲ. ಯದುವೀರ್ ಅವರನ್ನು ಗೆಲ್ಲಿಸಲಿದೆ’ ಎಂದು ಸಿ.ಟಿ.ರವಿ ಹೇಳಿದರು.</p><p>‘ಲಕ್ಷ್ಮಣ್ ಅವರು ಪಾಲಿಕೆ, ವಿಧಾನಪರಿಷತ್ ಚುನಾವಣೆಗಳಲ್ಲಿ ನಿಂತು ಸೋತಿದ್ದಾರೆ. ಅವರನ್ನು ಅಭ್ಯರ್ಥಿ ಮಾಡುವ ಮೂಲಕ ಸಿದ್ದರಾಮಯ್ಯ ಅವರು ಚುನಾವಣೆಗೆ ಮುಂಚೆಯೇ ಸೋಲು ಒಪ್ಪಿಕೊಂಡಿದ್ದಾರೆ’ ಎಂದು ಟೀಕಿಸಿದರು. </p><p>ಗೋಷ್ಠಿಯಲ್ಲಿ ಸಂಸದ ಪ್ರತಾಪಸಿಂಹ, ಶಾಸಕ ಟಿ.ಎಸ್.ಶ್ರೀವತ್ಸ, ಮುಖಂಡ ಸಂದೇಶ್ ಸ್ವಾಮಿ, ನಗರ ವಕ್ತಾರ ಎಂ.ಎ.ಮೋಹನ್, ಕೇಬಲ್ ಮಹೇಶ್, ಮಹೇಶ್ ರಾಜೇ ಅರಸ್, ದಯಾನಂದ ಪಟೇಲ್, ಪರೀಕ್ಷಿತ ರಾಜ ಅರಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಕಾಂಗ್ರೆಸ್, ಲೋಕಸಭಾ ಚುನಾವಣೆಯ ಪ್ರಣಾಳಿಕೆ ರೂಪಿಸಲು ನಗರ ನಕ್ಸಲರ ಸಹಾಯ ಪಡೆದಿದೆ’ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಆರೋಪಿಸಿದರು.</p><p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಜಾತಿ, ಪ್ರಾದೇಶಿಕತೆ, ಮತೀಯವಾದದ ಮೂಲಕ ದೇಶ ವಿಭಜಿಸುವ ರೋಗ ಸ್ವಾತಂತ್ರ್ಯ ಬಂದು 75 ವರ್ಷವಾದರೂ ಕಾಂಗ್ರೆಸ್ಗೆ ಹೋಗಿಲ್ಲ’ ಎಂದರು.</p><p>‘ನರೇಂದ್ರ ಮೋದಿ ಸರ್ಕಾರವು ಕಳೆದ 10 ವರ್ಷದಲ್ಲಿ ರಾಜ್ಯಕ್ಕೆ ₹ 4.91 ಲಕ್ಷ ಕೋಟಿ ಅನುದಾನ ನೀಡಿದೆ. ಯುಪಿಎ ಅವಧಿಯಲ್ಲಿ ₹1.42 ಲಕ್ಷ ಕೋಟಿ ನೀಡಲಾಗಿತ್ತು. ಇದು ಸುಳ್ಳೆಂದು ಚಾಮುಂಡೇಶ್ವರಿ ಮುಂದೆ ಸಿದ್ದರಾಮಯ್ಯ ಪ್ರಮಾಣ ಮಾಡಲಿ’ ಎಂದು ಸವಾಲು ಹಾಕಿದರು.</p><p>‘ಬಹಿರಂಗ ಚರ್ಚೆಯಲ್ಲಿ 2004–14ರ ಅವಧಿಯಲ್ಲಿ ನಡೆಸಿರುವ ಹಗರಣಗಳ ಚರ್ಚೆಯನ್ನೂ ನಡೆಸಲಿ. ರಾಜ್ಯಕ್ಕೆ ಅನುದಾನ ಹಂಚಿಕೆ ಕುರಿತ ಎಲ್ಲ ಪ್ರಶ್ನೆಗಳಿಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ಉತ್ತರ ನೀಡಿದ್ದಾರೆ. ಸಿದ್ದರಾಮಯ್ಯ ಅವರು ದೃಷ್ಟಿದೋಷ ನಿವಾರಿಸಿಕೊಳ್ಳಲಿ’ ಎಂದರು.</p><p>‘ಬರಪರಿಹಾರ ನಿಧಿಯನ್ನು ಬಿಜೆಪಿ ಆಡಳಿತವಿರುವ ಅಸ್ಸಾಂ, ಮಹಾರಾಷ್ಟ್ರಕ್ಕೂ ನೀಡಿಲ್ಲ. ನೀತಿ ಸಂಹಿತೆ ಮುಗಿದ ನಂತರ ಅನುದಾನ ಬಿಡುಗಡೆಯಾಗಲಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ಕಾಂಗ್ರೆಸ್ ಕೋಮುವಾದಿಯಾಗಿ ಬದಲಾಗಿದೆ. ಜನರ ನಂಬಿಕೆ ಕಳೆದುಕೊಂಡಿದ್ದು ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ. ಬಿಜೆಪಿಯು ರಾಜ್ಯದ 28 ಕ್ಷೇತ್ರಗಳಲ್ಲದೇ ನೆರೆಯ ತಮಿಳುನಾಡಿನಲ್ಲೂ ಗೆಲುವು ದಾಖಲಿಸಲಿದೆ. ಅಲ್ಲಿ ಪರ್ಯಾಯ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಲಿದೆ’ ಎಂದು ಹೇಳಿದರು. </p><p><strong>‘ಒಕ್ಕಲಿಗರು ರಾಷ್ಟ್ರವಾದಿಗಳು</strong>’: ‘ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಒಕ್ಕಲಿಗರೆಂದು ಹೇಳಿಕೊಂಡು ಮತ ಕೇಳುತ್ತಿದ್ದಾರೆ. ಅವರನ್ನು ಅವರ ಪಕ್ಷದವರೇ ಲೂಸ್ ಟಾಕರ್ ಎಂದು ಕರೆಯುತ್ತಾರೆ. ಒಕ್ಕಲಿಗ ಸಮುದಾಯವು ರಾಷ್ಟ್ರವಾದಿಯಾಗಿದ್ದು, ಲಕ್ಷ್ಮಣ್ಗೆ ಮತ ಕೊಡುವುದಿಲ್ಲ. ಯದುವೀರ್ ಅವರನ್ನು ಗೆಲ್ಲಿಸಲಿದೆ’ ಎಂದು ಸಿ.ಟಿ.ರವಿ ಹೇಳಿದರು.</p><p>‘ಲಕ್ಷ್ಮಣ್ ಅವರು ಪಾಲಿಕೆ, ವಿಧಾನಪರಿಷತ್ ಚುನಾವಣೆಗಳಲ್ಲಿ ನಿಂತು ಸೋತಿದ್ದಾರೆ. ಅವರನ್ನು ಅಭ್ಯರ್ಥಿ ಮಾಡುವ ಮೂಲಕ ಸಿದ್ದರಾಮಯ್ಯ ಅವರು ಚುನಾವಣೆಗೆ ಮುಂಚೆಯೇ ಸೋಲು ಒಪ್ಪಿಕೊಂಡಿದ್ದಾರೆ’ ಎಂದು ಟೀಕಿಸಿದರು. </p><p>ಗೋಷ್ಠಿಯಲ್ಲಿ ಸಂಸದ ಪ್ರತಾಪಸಿಂಹ, ಶಾಸಕ ಟಿ.ಎಸ್.ಶ್ರೀವತ್ಸ, ಮುಖಂಡ ಸಂದೇಶ್ ಸ್ವಾಮಿ, ನಗರ ವಕ್ತಾರ ಎಂ.ಎ.ಮೋಹನ್, ಕೇಬಲ್ ಮಹೇಶ್, ಮಹೇಶ್ ರಾಜೇ ಅರಸ್, ದಯಾನಂದ ಪಟೇಲ್, ಪರೀಕ್ಷಿತ ರಾಜ ಅರಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>