ಬೆಂಗಳೂರು: ಬೆಂಗಳೂರಿನ ಜಯನಗರ ಮತಕೇಂದ್ರದಲ್ಲಿ ಮತದಾನ ಮಾಡಿದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಮತದಾನ ಮಾಡುವಂತೆ ಯುವಕರಿಗೆ ಕರೆ ನೀಡಿದ್ದಾರೆ.
ದಯವಿಟ್ಟು ವಯಸ್ಸಾಗಿರುವ ನಮ್ಮನ್ನು ನೋಡಿ. ನಾವೇ 6 ಗಂಟೆಗೆ ಎದ್ದು ಮತದಾನ ಮಾಡುತ್ತಿದ್ದೇವೆ. ಮತಕೇಂದ್ರಕ್ಕೆ ಬಂದು ಮತದಾನ ಮಾಡಿ. ಮತದಾನ ಮಾಡುವುದು ಪ್ರಜಾಪ್ರಭುತ್ವದ ಪವಿತ್ರ ಕರ್ತವ್ಯ ಎಂದು ಹೇಳಿದ್ದಾರೆ.
#WATCH | Jayanagar, Bengaluru | Sudha Murty gives a message to young voters after casting her vote; says, "Please look at us. We are oldies but we get up at 6 o'clock, come here and vote. Please learn from us. Voting is a sacred part of democracy..."#KarnatakaElectionspic.twitter.com/B1ecZCH93M
ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಸಹ ಬೆಂಗಳೂರಿನಲ್ಲಿ ಮತದಾನ ಮಾಡಿದರು
‘ಮೊದಲು ನಾವು ಮತ ಮಾಡಬೇಕು. ನಂತರ ಇದು ಒಳ್ಳೆಯದು, ಇದು ಒಳ್ಳೆಯದಲ್ಲ ಎಂದು ಹೇಳಬಹುದು. ಆದರೆ, ನಾವು ಮತದಾನ ಮಾಡದಿದ್ದರೆ ಟೀಕೆ ಮಾಡುವ ಹಕ್ಕು ನಮಗಿಲ್ಲ’ಎಂದು ನಾರಾಯಣ ಮೂರ್ತಿ ಬೆಂಗಳೂರಿನಲ್ಲಿ ಮತ ಚಲಾಯಿಸಿದ ನಂತರ ಹೇಳಿದರು.