ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ಮಾಡಿ: ಯುವಕರಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ, ಸುಧಾ ಮೂರ್ತಿ ಕರೆ

Published 10 ಮೇ 2023, 3:39 IST
Last Updated 10 ಮೇ 2023, 3:55 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನ ಜಯನಗರ ಮತಕೇಂದ್ರದಲ್ಲಿ ಮತದಾನ ಮಾಡಿದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಮತದಾನ ಮಾಡುವಂತೆ ಯುವಕರಿಗೆ ಕರೆ ನೀಡಿದ್ದಾರೆ.

ದಯವಿಟ್ಟು ವಯಸ್ಸಾಗಿರುವ ನಮ್ಮನ್ನು ನೋಡಿ. ನಾವೇ 6 ಗಂಟೆಗೆ ಎದ್ದು ಮತದಾನ ಮಾಡುತ್ತಿದ್ದೇವೆ. ಮತಕೇಂದ್ರಕ್ಕೆ ಬಂದು ಮತದಾನ ಮಾಡಿ. ಮತದಾನ ಮಾಡುವುದು ಪ್ರಜಾಪ್ರಭುತ್ವದ ಪವಿತ್ರ ಕರ್ತವ್ಯ ಎಂದು ಹೇಳಿದ್ದಾರೆ.

ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಸಹ ಬೆಂಗಳೂರಿನಲ್ಲಿ ಮತದಾನ ಮಾಡಿದರು

‘ಮೊದಲು ನಾವು ಮತ ಮಾಡಬೇಕು. ನಂತರ ಇದು ಒಳ್ಳೆಯದು, ಇದು ಒಳ್ಳೆಯದಲ್ಲ ಎಂದು ಹೇಳಬಹುದು. ಆದರೆ, ನಾವು ಮತದಾನ ಮಾಡದಿದ್ದರೆ ಟೀಕೆ ಮಾಡುವ ಹಕ್ಕು ನಮಗಿಲ್ಲ’ಎಂದು ನಾರಾಯಣ ಮೂರ್ತಿ ಬೆಂಗಳೂರಿನಲ್ಲಿ ಮತ ಚಲಾಯಿಸಿದ ನಂತರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT