‘ನಮ್ಮ ಗ್ರಾಮಕ್ಕೆ ಅಗತ್ಯ ಮೂಲ ಸೌಕರ್ಯ ಒದಗಿಸುವವರೆಗೂ ಯಾರು ಗ್ರಾಮಕ್ಕೆ ಬರಬೇಡಿ. ಈ ಬಾರಿ ಚುನಾವಣೆಯಲ್ಲಿ ನಾವು ಯಾರೂ ಮತ ಹಾಕುವುದಿಲ್ಲ. ಐದು ವರ್ಷದಲ್ಲಿ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸ ಆಗಿಲ್ಲ. ಕುಡಿಯುವ ನೀರಿಲ್ಲ. ಚರಂಡಿ, ರಸ್ತೆ ಅಭಿವೃದ್ಧಿ ಆಗಿಲ್ಲ. ನಮ್ಮ ಸಮಸ್ಯೆಗಳನ್ನು ಕೇಳುವವರು ಯಾರೂ ಇಲ್ಲ’ ಎಂದು ತರಾಟೆಗೆ ತೆಗೆದುಕೊಂಡರು.