‘ಚುನಾವಣಾ ಆಯೋಗದ ಪತ್ರ, ಅಂಗವಿಕಲ ಹಕ್ಕುಗಳ ಕಾಯ್ದೆ 2016 ಅನ್ನು ಉಲ್ಲಂಘಿಸಿ, ರಾಜ್ಯದಾದ್ಯಂತ ಸಾವಿರಾರು ಅಂಗವಿಕಲ ಸರ್ಕಾರಿ ನೌಕರರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಅಂಗವಿಕಲರಿಗೆ ಕರ್ತವ್ಯದಿಂದ ತಪ್ಪಿಸಿಕೊಳ್ಳುವ ಉದ್ದೇಶ ಇಲ್ಲ. ಆದರೆ, ಮತಗಟ್ಟೆಗಳಲ್ಲಿ ಅಂಗವಿಕಲ ಸ್ನೇಹಿ ಸೌಲಭ್ಯ ಇಲ್ಲದಿದ್ದರೆ, ಅವರು ಕಾರ್ಯನಿರ್ವಹಿಸುವುದು ಕಷ್ಟವಾಗುತ್ತದೆ’ ಎನ್ನುತ್ತಾರೆ ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಸಂಘದ ಅಧ್ಯಕ್ಷ ಇಂದ್ರೇಶ್ ಆರ್.