ಅತ್ತ ಅಧಿಕೃತ ಘೋಷಣೆಯಾಗುತ್ತಲೇ ಇತ್ತ ಟ್ವೀಟ್ ಮಾಡಿದ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಡಿ.ಕೆ ಶಿವಕುಮಾರ್ ಅವರೊಂದಿಗಿನ ಚಿತ್ರವೊಂದನ್ನು ಹಂಚಿಕೊಂಡರು. ‘ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ’ ಎಂದು ಆ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಸಿಎಂ, ಡಿಸಿಎಂ ಮತ್ತು ಸಚಿವರ ಪದಗ್ರಹಣ ಕಾರ್ಯಕ್ರಮ ಶನಿವಾರ ನಡೆಯಲಿದೆ.