ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ: ಸಿದ್ದರಾಮಯ್ಯ

Published 18 ಮೇ 2023, 7:42 IST
Last Updated 18 ಮೇ 2023, 7:42 IST
ಅಕ್ಷರ ಗಾತ್ರ

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ನಿಂದ ಅಧಿಕೃತ ಘೋಷಣೆಯಾಗುತ್ತಲೇ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಅವರು, ‘ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ’ ಎಂದು ಹೇಳಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನೂ, ಉಪ ಮುಖ್ಯಮಂತ್ರಿಯನ್ನಾಗಿ ಡಿ.ಕೆ ಶಿವಕುಮಾರ್‌ ಅವರನ್ನು ನೇಮಕ ಮಾಡಿರುವುದಾಗಿ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಗುರುವಾರ ಘೋಷಣೆ ಮಾಡಿದರು.

ಅತ್ತ ಅಧಿಕೃತ ಘೋಷಣೆಯಾಗುತ್ತಲೇ ಇತ್ತ ಟ್ವೀಟ್‌ ಮಾಡಿದ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಡಿ.ಕೆ ಶಿವಕುಮಾರ್‌ ಅವರೊಂದಿಗಿನ ಚಿತ್ರವೊಂದನ್ನು ಹಂಚಿಕೊಂಡರು. ‘ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ’ ಎಂದು ಆ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

ಸಿಎಂ, ಡಿಸಿಎಂ ಮತ್ತು ಸಚಿವರ ಪದಗ್ರಹಣ ಕಾರ್ಯಕ್ರಮ ಶನಿವಾರ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT