ಮನೆ–ಮನೆ ಪ್ರಚಾರ: ಏ.10 ಮತ್ತು 11ರಂದು ಏಕಕಾಲದಲ್ಲಿ ರಾಜ್ಯದ ಎಲ್ಲ 58 ಸಾವಿರ ಬೂತ್ಗಳಲ್ಲಿ ಬೂತ್ ಸಮಿತಿ ಸಭೆ ಹಮ್ಮಿಕೊಳ್ಳಲಾಗಿದೆ. ಮನೆ–ಮನೆ ಪ್ರಚಾರಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು, ಏ.15,16 ಮತ್ತು 17ರಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಂದ ಎಲ್ಲ ಹಂತದ ಪದಾಧಿಕಾರಿಗಳು, ಕಾರ್ಯಕರ್ತರು, ಮನೆ–ಮನೆ ಭೇಟಿ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಈ ಬಾರಿ ಚುನಾವಣೆಯ ಮೂರು ಮುಖ್ಯ ಅಂಶಗಳಾದ ಸುರಕ್ಷಿತ ಭಾರತ, ಸಾಂಸ್ಕೃತಿಕ ಭಾರತ, ವಿಕಸಿತ ಭಾರತದ ಪರಿಕಲ್ಪನೆಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ತಿಳಿಸಿದರು.