ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವರಾಜ್‌ಕುಮಾರ್‌ ಭೇಟಿಯಾದ ರಣದೀಪ್‌ ಸಿಂಗ್‌ ಸುರ್ಜೇವಾಲಾ

Published 23 ಮೇ 2023, 5:45 IST
Last Updated 23 ಮೇ 2023, 5:45 IST
ಅಕ್ಷರ ಗಾತ್ರ

ಬೆಂಗಳೂರು: ನಟ ಶಿವರಾಜ್‌ಕುಮಾರ್ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಂಗಳವಾರ ಬೆಳಿಗ್ಗೆ ಭೇಟಿ ಮಾಡಿ ಮಾತುಕತೆ ನಡೆಸಿದರು.

ಮಾನ್ಯತಾ ಟೆಕ್ ‍ಪಾರ್ಕ್‌ನಲ್ಲಿರುವ ಶಿವರಾಜ್‌ಕುಮಾರ್ ನಿವಾಸಕ್ಕೆ ಸುರ್ಜೇವಾಲಾ ತೆರಳಿದರು.

ಶಿವರಾಜ್‌ಕುಮಾರ್ ಮತ್ತು ಗೀತಾ ಶಿವರಾಜ್‌ಕುಮಾರ್‌ ಅವರನ್ನು ಭೇಟಿಯಾಗಿದ್ದು ನಿಜವಾಗಿಯೂ ಸಂತೋಷ ಮತ್ತು ಗೌರವವಾಗಿದೆ. ಕಾಂಗ್ರೆಸ್ ಪ್ರಚಾರಕ್ಕೆ ಶಕ್ತಿ ತುಂಬಿದ ಮತ್ತು ಕರ್ನಾಟಕದ ಅಭಿವೃದ್ಧಿಗಾಗಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿದ್ದಕ್ಕಾಗಿ ಅತ್ಯಂತ ಜನಪ್ರಿಯ ಕಲಾವಿದ ಮತ್ತು ಉತ್ತಮ ಮಾನವನಿಗೆ ಧನ್ಯವಾದಗಳು ಎಂದು ಸುರ್ಜೇವಾಲಾ ಟ್ವೀಟ್‌ ಮಾಡಿದ್ದಾರೆ.

ಸಿದ್ದರಾಮಯ್ಯ, ಜಗದೀಶ ಶೆಟ್ಟರ್ ಸೇರಿದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಿವರಾಜ್‌ಕುಮಾರ್ ಪ್ರಚಾರ ನಡೆಸಿದ್ದರು.

ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ಸಿಗದ ಕಾರಣಕ್ಕೆ ಶಿವರಾಜ್‌ಕುಮಾರ್ ಬೇಸರಗೊಂಡಿದ್ದಾರೆ.

ತಮಗೆ ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಮಧು ಬಂಗಾರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅದಕ್ಕೆ ಶಿವರಾಜ್‌ಕುಮಾರ್ ಕೂಡ ಧ್ವನಿಗೂಡಿಸಿದ್ದರು.

ತಮ್ಮ ವಿಶಿಷ್ಟ ಪರಂಪರೆಯೊಂದಿಗೆ, ಗೀತಾ ಶಿವರಾಜ್‌ಕುಮಾರ್ ಈಗಾಗಲೇ ಕಾಂಗ್ರೆಸ್ ಕುಟುಂಬದ ಭಾಗವಾಗಿದ್ದಾರೆ. ನಾವು ಒಟ್ಟಾಗಿ ಕರ್ನಾಟಕದ ಅಭಿವೃದ್ಧಿ ಮತ್ತು ಸಮೃದ್ಧಿಯ ಪ್ರತಿಜ್ಞೆಗೆ ಬದ್ಧರಾಗಿದ್ದೇವೆ ಎಂದು ಸುರ್ಜೇವಾಲಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT