ಕಳೆದ 10 ವರ್ಷಗಳಲ್ಲಿ ಪರಿಹಾರವಾಗದಿರುವ ಸಮಸ್ಯೆಗಳಿಂದ ಬೇಸತ್ತಿರುವ ಮತದಾರರು ಪರ್ಯಾಯ ಪಕ್ಷದತ್ತ ಆಕರ್ಷಿತರಾಗುತ್ತಿದ್ದಾರೆ ಎಂದು ನಟ ಶಿವರಾಜ್ಕುಮಾರ್ ಹೇಳಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ ಕುಂದಾಪುರ ತಾಲ್ಲೂಕಿನ ವಂಡ್ಸೆ ನೆಂಪುವಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪತ್ನಿ ಗೀತಾ ಅವರ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜಕಾರಣದಲ್ಲಿ ಭರವಸೆ ನೀಡುವುದು ಮುಖ್ಯವಲ್ಲ. ಈಡೇರಿಸುವುದು ಮುಖ್ಯ. ಎಲ್ಲವನ್ನೂ ಪ್ರಾಯೋಗಿಕವಾಗಿ ನೋಡುವ ಅಳೆಯುವ ಮನೋಭಾವ ರೂಢಿಸಿಕೊಂಡಿರುವ ಯುವ ಮತದಾರರು ಈ ಬಾರಿ ಪತ್ನಿ ಗೀತಾ ಅವರನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.