<p><strong>ಬೆಂಗಳೂರು:</strong> ‘ವರುಣ ಕ್ಷೇತ್ರದಲ್ಲಿ 60 ಸಾವಿರ ಮತಗಳ ಲೀಡ್ ನೀಡದೇ ಇದ್ದರೆ ತಾವು ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾರ ಭಯ ಕಾಡಿದೆ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ಕುಮಾರ್ ಪ್ರಶ್ನಿಸಿದ್ದಾರೆ.</p>.<p>‘ಸ್ವಕ್ಷೇತ್ರದ ಜನರ ಮುಂದೆ ಜನಪ್ರತಿನಿಧಿ ಹೆಚ್ಚಿನ ಮತಕೊಡಿ ಎನ್ನುವುದು ತಪ್ಪಲ್ಲ. ಆದರೆ, ಸಿದ್ದರಾಮಯ್ಯ ಅಧಿಕಾರ ಕೈತಪ್ಪುವ ಭೀತಿಯನ್ನು ನೇರವಾಗಿ ವ್ಯಕ್ತಪಡಿಸಿದ್ದಾರೆ. ಬಹುಮತ ಸರ್ಕಾರದ ಮುಖ್ಯಮಂತ್ರಿ ಯಾರ ಭಯಕ್ಕೆ ಈ ಮಾತು ಹೇಳಿದ್ದಾರೆಂಬುದು ಕರ್ನಾಟಕದ ಜನರಿಗೆ ಗೊತ್ತಾಗಬೇಕು’ ಎಂದು ಅವರು ಹೇಳಿದ್ದಾರೆ.</p>.<p>‘ಸಿದ್ದರಾಮಯ್ಯ ಅವರೇ ನಿಮಗೆ ಯಾರ ಭಯ? ಹೈಕಮಾಂಡ್ನದೋ, ಶಿವಕುಮಾರ್ ಅವರದ್ದೋ ಅಥವಾ ಶಾಸಕರದ್ದೋ? ನಿಮಗೆ ನಿಮ್ಮ ಅಧಿಕಾರದ ಬಗ್ಗೆಯೇ ಗ್ಯಾರಂಟಿ ಇಲ್ಲ. ಇನ್ನು ಜನತೆಗೆ ಯಾವ ಗ್ಯಾರಂಟಿ ಕೊಡುತ್ತೀರಿ ಎನ್ನುವುದನ್ನು ನಾಡಿಗೆ ಸ್ಪಷ್ಟಪಡಿಸಿ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ವರುಣ ಕ್ಷೇತ್ರದಲ್ಲಿ 60 ಸಾವಿರ ಮತಗಳ ಲೀಡ್ ನೀಡದೇ ಇದ್ದರೆ ತಾವು ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾರ ಭಯ ಕಾಡಿದೆ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ಕುಮಾರ್ ಪ್ರಶ್ನಿಸಿದ್ದಾರೆ.</p>.<p>‘ಸ್ವಕ್ಷೇತ್ರದ ಜನರ ಮುಂದೆ ಜನಪ್ರತಿನಿಧಿ ಹೆಚ್ಚಿನ ಮತಕೊಡಿ ಎನ್ನುವುದು ತಪ್ಪಲ್ಲ. ಆದರೆ, ಸಿದ್ದರಾಮಯ್ಯ ಅಧಿಕಾರ ಕೈತಪ್ಪುವ ಭೀತಿಯನ್ನು ನೇರವಾಗಿ ವ್ಯಕ್ತಪಡಿಸಿದ್ದಾರೆ. ಬಹುಮತ ಸರ್ಕಾರದ ಮುಖ್ಯಮಂತ್ರಿ ಯಾರ ಭಯಕ್ಕೆ ಈ ಮಾತು ಹೇಳಿದ್ದಾರೆಂಬುದು ಕರ್ನಾಟಕದ ಜನರಿಗೆ ಗೊತ್ತಾಗಬೇಕು’ ಎಂದು ಅವರು ಹೇಳಿದ್ದಾರೆ.</p>.<p>‘ಸಿದ್ದರಾಮಯ್ಯ ಅವರೇ ನಿಮಗೆ ಯಾರ ಭಯ? ಹೈಕಮಾಂಡ್ನದೋ, ಶಿವಕುಮಾರ್ ಅವರದ್ದೋ ಅಥವಾ ಶಾಸಕರದ್ದೋ? ನಿಮಗೆ ನಿಮ್ಮ ಅಧಿಕಾರದ ಬಗ್ಗೆಯೇ ಗ್ಯಾರಂಟಿ ಇಲ್ಲ. ಇನ್ನು ಜನತೆಗೆ ಯಾವ ಗ್ಯಾರಂಟಿ ಕೊಡುತ್ತೀರಿ ಎನ್ನುವುದನ್ನು ನಾಡಿಗೆ ಸ್ಪಷ್ಟಪಡಿಸಿ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>