ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಸಿದ್ದರಾಮಯ್ಯ ಕಾರಿನಿಂದ ಬೀಳುವಾಗ ರಕ್ಷಿಸಿದ ಅಂಗರಕ್ಷಕ

Published 29 ಏಪ್ರಿಲ್ 2023, 7:05 IST
Last Updated 29 ಏಪ್ರಿಲ್ 2023, 7:05 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕಾರಿನಿಂದ ಕೆಳಗೆ ಬೀಳುವಾಗ ಅಂಗರಕ್ಷಕ ತಕ್ಷಣವೇ ಅವರ ನೆರವಿಗೆ ಧಾವಿಸಿ ಅವರನ್ನು ರಕ್ಷಿಸಿರುವ ಘಟನೆ ಜಿಲ್ಲೆಯ ಕೂಡ್ಲಿಗಿಯಲ್ಲಿ ನಡೆದಿದೆ.

ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಎನ್‌.ಟಿ. ಶ್ರೀನಿವಾಸ್‌ ಪರ ಪಟ್ಟಣದಲ್ಲಿ ಪ್ರಚಾರ ಕೈಗೊಳ್ಳಲು ಪಟ್ಟಣ ಹೊರವಲಯದ ಹೆಲಿಪ್ಯಾಡ್‌ಗೆ ಬಂದಿಳಿದಿದ್ದರು.

ಹೆಲಿಪ್ಯಾಡ್‌ ಸುತ್ತ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಬಳಿಕ ಕಾರಿನ ಒಂದು ಬದಿಯಲ್ಲಿ ನಿಂತು ಜನರತ್ತ ಕೈಬೀಸಿದರು. ಬಳಿಕ ಕಾರೊಳಗೆ ಕುಳಿತುಕೊಳ್ಳುವಾಗ ಆಯಾತಪ್ಪಿ ಕೆಳಬೀಳುವಾಗ ತಕ್ಷಣವೇ ಅಂಗರಕ್ಷಕ ನೆರವಿಗೆ ಧಾವಿಸಿ, ಒಳಗೆ ಕೂರಿಸಿದ್ದಾನೆ.

ಬಳಿಕ ಅವರ ಸಹಾಯಕರೊಬ್ಬರು ನೀರು ಕೊಟ್ಟು ಉಪಚರಿಸಿದರು. ನಂತರ ಸ್ವಲ್ಪ ಸುಧಾರಿಸಿಕೊಂಡು ವೇದಿಕೆ ಕಾರ್ಯಕ್ರಮದತ್ತ ಸಿದ್ದರಾಮಯ್ಯ ಮುಖ ಮಾಡಿದರು. ಚುನಾವಣಾ ಪ್ರಚಾರದಲ್ಲಿ ಬಿಡುವಿಲ್ಲದೆ ಓಡಾಡುತ್ತಿರುವ ಸಿದ್ದರಾಮಯ್ಯ ಸುಸ್ತು ಆದಂತೆ ಕಂಡು ಬಂದರು.

ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ: ಸಿದ್ದರಾಮಯ್ಯ
ಗಾಬರಿ ಪಡುವಂತಹದ್ದೇನಿಲ್ಲ ಗಟ್ಟಿಮುಟ್ಟಾಗಿದ್ದೇನೆ. ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್‌ ಸ್ಟೆಪ್‌ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ.ಈಗ ಆರಾಮಾಗಿದ್ದೇನೆ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT