ಹಾಸನ: ಲೋಕಸಭೆ ಚುನಾವಣೆಗೆ ಏ.26 ರಂದು ಮತದಾನ ನಡೆಯಲಿದ್ದು, ಆ ಸಂದರ್ಭದಲ್ಲಿ ಎಲ್ಲರೂ ತಮ್ಮ ಮತಕ್ಷೇತ್ರಗಳಲ್ಲಿ ಹಾಜರಿದ್ದು, ಮತದಾನ ಮಾಡಬೇಕು ಎಂಬ ಉದ್ದೇಶದಿಂದ ಏ.24 ರಂದು ಸಂಜೆ 6 ಗಂಟೆಯಿಂದ ಏ.26 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯ ಎಲ್ಲ ರೆಸಾರ್ಟ್, ವಸತಿಯುತ ಹೋಟೆಲ್, ಹೋಂಸ್ಟೇಗಳಲ್ಲಿ ವಾಸ್ತವ್ಯವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಆದೇಶ ಹೊರಡಿಸಿದ್ದಾರೆ.