ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರಟಗೆರೆ| ಪ್ರಚಾರದ ವೇಳೆ ಜಿ. ಪರಮೇಶ್ವರ್‌ ತಲೆಗೆ ಕಲ್ಲೇಟು

Published 28 ಏಪ್ರಿಲ್ 2023, 12:53 IST
Last Updated 28 ಏಪ್ರಿಲ್ 2023, 12:53 IST
ಅಕ್ಷರ ಗಾತ್ರ

ಕೊರಟಗೆರೆ: ತಾಲ್ಲೂಕಿನ ಭೈರೇನಹಳ್ಳಿಯಲ್ಲಿ ಶುಕ್ರವಾರ ಪ್ರಚಾರದ ವೇಳೆ ಕಲ್ಲು ತೂರಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಾ.ಜಿ.ಪರಮೇಶ್ವರ ಗಾಯಗೊಂಡಿದ್ದಾರೆ. ತಲೆಗೆ ಗಾಯವಾಗಿದ್ದು, ಸಮೀಪದ ಅಕ್ಕಿರಾಮಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.

ಪ್ರಚಾರ ಸಮಯದಲ್ಲಿ ಕಾರ್ಯಕರ್ತರು ಪರಮೇಶ್ವರ ಅವರನ್ನು ಎತ್ತಿಕೊಂಡು ಹೂವು ಸುರಿದಿದ್ದಾರೆ. ಈ ಸಮಯದಲ್ಲಿ ತೂರಿಬಂದ ಕಲ್ಲು ತಲೆಗೆ ಬಿದ್ದಿದೆ. ತಲೆಯಿಂದ ರಕ್ತ ಸುರಿದಿದ್ದು, ಬಟ್ಟೆಯಿಂದ ತಲೆಯನ್ನು ಒತ್ತಿ ಹಿಡಿದುಕೊಂಡಿದ್ದಾರೆ. ನಂತರ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ. ಹೂವು ಸುರಿಯುವ ಸಂದರ್ಭ ನೋಡಿಕೊಂಡು ದುಷ್ಕರ್ಮಿಗಳು ಕಲ್ಲು ತೂರಿರಬಹುದು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT