<p><strong>ನೆಲಮಂಗಲ:</strong> ‘ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ, ಪರಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿ, ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಹಾಗಾಗಿ, ಈ ಚುನಾವಣೆಯಲ್ಲಿ ನಮ್ಮ ಸಮುದಾಯ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರನ್ನು ಬೆಂಬಲಿಸಲಿದೆ‘ ಎಂದು ರಾಜ್ಯ ಭೋವಿ (ವಡ್ಡರ) ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಚೌಡಯ್ಯ ತಿಳಿಸಿದರು.</p>.<p>ಪಟ್ಟಣದಲ್ಲಿ ರಾಜ್ಯ ಭೋವಿ (ವಡ್ಡರ) ಸಂಘ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗದವರ ಏಳಿಗೆಗಾಗಿ ಅನೇಕ ಕಾರ್ಯಕ್ರಮಗಳನ್ನು ನಿರಂತರವಾಗಿ ನೀಡುತ್ತಿದೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ಸೂಚಿಸುತ್ತಿದ್ದೇವೆ‘ ಎಂದು ಹೇಳಿದರು.</p>.<p>ಈಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿರುವ ಗ್ರಾ.ಪಂ.ಸದಸ್ಯ ಪೈಂಟ್ ಮಂಜುನಾಥ್ ಮಾತನಾಡಿ, ‘ಶಾಸಕ ಎನ್.ಶ್ರೀನಿವಾಸ್ ಅವರು ನಮ್ಮ ಕ್ಷೇತ್ರಕ್ಕೆ ₹900 ಕೋಟಿಗೂ ಹೆಚ್ಚು ಅನುದಾನವನ್ನು ತಂದಿದ್ದಾರೆ. ರಕ್ಷಾ ರಾಮಯ್ಯ ಅವರನ್ನು ಆರಿಸಿ ಕಳುಹಿಸಿದರೆ, ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ವೇಗ ಸಿಕ್ಕಂತಾಗುತ್ತದೆ. ಹಾಗಾಗಿ ನಮ್ಮ ಸಮುದಾಯ ಅವರಿಗೆ ಬೆಂಬಲವಾಗಿ ನಿಲ್ಲಲಿದೆ‘ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಜಯಶಂಕರ್, ಸಂಘದ ಜಂಟಿ ಕಾರ್ಯದರ್ಶಿ ರಾಜಣ್ಣ, ಕೆಪಿಸಿಸಿ ಸದಸ್ಯ ನಾಗೇಶ್, ಮುಖಂಡರಾದ ಗೋವರ್ಧನ್(ಗೋಪಿ), ಪ್ರದೀಪ್, ಜಯರಾಮು, ಪುರಸಭೆ ಮಾಜಿ ಅಧ್ಯಕ್ಷ ಆರ್.ಉಮಾಶಂಕರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> ‘ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ, ಪರಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿ, ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಹಾಗಾಗಿ, ಈ ಚುನಾವಣೆಯಲ್ಲಿ ನಮ್ಮ ಸಮುದಾಯ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರನ್ನು ಬೆಂಬಲಿಸಲಿದೆ‘ ಎಂದು ರಾಜ್ಯ ಭೋವಿ (ವಡ್ಡರ) ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಚೌಡಯ್ಯ ತಿಳಿಸಿದರು.</p>.<p>ಪಟ್ಟಣದಲ್ಲಿ ರಾಜ್ಯ ಭೋವಿ (ವಡ್ಡರ) ಸಂಘ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗದವರ ಏಳಿಗೆಗಾಗಿ ಅನೇಕ ಕಾರ್ಯಕ್ರಮಗಳನ್ನು ನಿರಂತರವಾಗಿ ನೀಡುತ್ತಿದೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ಸೂಚಿಸುತ್ತಿದ್ದೇವೆ‘ ಎಂದು ಹೇಳಿದರು.</p>.<p>ಈಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿರುವ ಗ್ರಾ.ಪಂ.ಸದಸ್ಯ ಪೈಂಟ್ ಮಂಜುನಾಥ್ ಮಾತನಾಡಿ, ‘ಶಾಸಕ ಎನ್.ಶ್ರೀನಿವಾಸ್ ಅವರು ನಮ್ಮ ಕ್ಷೇತ್ರಕ್ಕೆ ₹900 ಕೋಟಿಗೂ ಹೆಚ್ಚು ಅನುದಾನವನ್ನು ತಂದಿದ್ದಾರೆ. ರಕ್ಷಾ ರಾಮಯ್ಯ ಅವರನ್ನು ಆರಿಸಿ ಕಳುಹಿಸಿದರೆ, ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ವೇಗ ಸಿಕ್ಕಂತಾಗುತ್ತದೆ. ಹಾಗಾಗಿ ನಮ್ಮ ಸಮುದಾಯ ಅವರಿಗೆ ಬೆಂಬಲವಾಗಿ ನಿಲ್ಲಲಿದೆ‘ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಜಯಶಂಕರ್, ಸಂಘದ ಜಂಟಿ ಕಾರ್ಯದರ್ಶಿ ರಾಜಣ್ಣ, ಕೆಪಿಸಿಸಿ ಸದಸ್ಯ ನಾಗೇಶ್, ಮುಖಂಡರಾದ ಗೋವರ್ಧನ್(ಗೋಪಿ), ಪ್ರದೀಪ್, ಜಯರಾಮು, ಪುರಸಭೆ ಮಾಜಿ ಅಧ್ಯಕ್ಷ ಆರ್.ಉಮಾಶಂಕರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>