ವಿಚಾರಣೆ ವೇಳೆ ಶಶಿಕಲಾ ಜೊಲ್ಲೆ ಪರ ವಾದ ಮಂಡಿಸಿದ ವಕೀಲ ಶಿವರಾಜ್ ಎಸ್.ಬಳ್ಳೊಳಿ, ‘ಇದೊಂದು ರಾಜಕೀಯ ದುರುದ್ದೇಶದಿಂದ ಕೂಡಿದ ಪ್ರಕರಣ. ಅರ್ಜಿದಾರರ ಏಜೆಂಟ್ ಜೇಬಿನಲ್ಲಿ ₹ 10 ಸಾವಿರ ನಗದು ಇತ್ತು ಎಂಬ ಏಕೈಕ ಕಾರಣಕ್ಕೆ ಈ ಪ್ರಕರಣ ದಾಖಲಿಸಲಾಗಿದೆ. ಈ ಹಣ ಲಂಚದ ಹಣ ಎಂಬುದನ್ನು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಗಳಿಲ್ಲ’ ಎಂದು ಮನವರಿಕೆ ಮಾಡಿಕೊಟ್ಟರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಪ್ರಕರಣ ರದ್ದುಪಡಿಸಿ ಆದೇಶಿಸಿತು.