ಅಭ್ಯರ್ಥಿಯೇ ಕ್ಷೇತ್ರದಲ್ಲಿ ಕಾಣಿಸಿಕೊಳ್ಳದಿರುವುದರಿಂದ, ಜೆಡಿಎಸ್ ಕಾರ್ಯಕರ್ತರಲ್ಲೂ ಉತ್ಸಾಹ ಇಲ್ಲದಂತಾಗಿದೆ. ಅಲ್ಲದೇ, ಆ ಪಕ್ಷದಲ್ಲಿ ಯಾವುದೇ ಚಟುವಟಿಕೆಗಳು ಕೂಡ ಕಂಡುಬರುತ್ತಿಲ್ಲ. ಇದು ಕ್ಷೇತ್ರದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅಲ್ಲದೇ, ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪರೋಕ್ಷವಾಗಿ ಬೆಂಬಲ ನೀಡುತ್ತಿದೆಯೇ ಎಂಬ ಪ್ರಶ್ನೆಯೂ ಎದ್ದಿದೆ. ಕಾಂಗ್ರೆಸ್ ವಿರುದ್ಧದ ತಂತ್ರಗಾರಿಕೆಯಲ್ಲಿ ಜೆಡಿಎಸ್ ವಿಫಲವಾಗಿದೆ ಎನ್ನಲಾಗುತ್ತಿದೆ. ಕ್ರಿಯಾಶೀಲವಾಗಿಲ್ಲದ ಅಭ್ಯರ್ಥಿಯನ್ನು ಬದಲಾವಣೆ ಮಾಡುವ ಸಾಧ್ಯತೆಯೂ ಇದೆ.