ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾತ್ರಿ ಖರ್ಗೆಗೆ ವರದಿ, ಶೀಘ್ರವೇ ಸರ್ಕಾರ ರಚನೆ: ರಣದೀಪ್‌ ಸಿಂಗ್‌ ಸುರ್ಜೇವಾಲ

Published 15 ಮೇ 2023, 9:42 IST
Last Updated 15 ಮೇ 2023, 9:42 IST
ಅಕ್ಷರ ಗಾತ್ರ

ನವದೆಹಲಿ: ಶೀಘ್ರವೇ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡುತ್ತೇವೆ ಎಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿದ್ದಾರೆ.

ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೀಕ್ಷಕರು ಇಂದು ರಾತ್ರಿಯ ಒಳಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವರದಿ ಸಲ್ಲಿಸಲಿದ್ದಾರೆ. ಶೀಘ್ರವೇ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಲಿದ್ದೇವೆ‘ ಎಂದು ಹೇಳಿದರು.

ಭಾನುವಾರ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ, ಹೈಕಮಾಂಡ್‌ನಿಂದ ಬಂದಿದ್ದ ವೀಕ್ಷಕರು ಶಾಸಕರ ಅಭಿಪ್ರಾಯ ಪಡೆದಿದ್ದಾರೆ. ಸೋಮವಾರ ರಾತ್ರಿ ಅದನ್ನು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಲಿದ್ದಾರೆ. ಸಿಎಂ ಆಯ್ಕೆಯ ಕುರಿತು ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ವೀಕ್ಷಕರಲ್ಲಿ ಓರ್ವರಾದ, ಭನ್ವರ್‌ ಜಿತೇಂದ್ರ ಸಿಂಗ್‌, ಕಳೆದ ರಾತ್ರಿ ನಾವು ಶಾಸಕರೊಂದಿಗೆ 4–5 ಗಂಟೆಗಳ ಕಾಲ ಚರ್ಚೆ ಮಾಡಿ ಅವರ, ಅಭಿಪ್ರಾಯ ಪಡೆದಿದ್ದೇವೆ. ಇಂದು ಸಂಜೆಯೊಳಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವರದಿ ಸಲ್ಲಿಸುತ್ತೇವೆ‘ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT