<p><strong>ಬೆಂಗಳೂರು: </strong>ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ 15 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜೆಡಿಎಸ್ ಅಧಿಕೃತವಾಗಿ ಗುರುವಾರ ಬಿಡುಗಡೆ ಮಾಡಿದೆ.<br /> ಪಕ್ಷದ ಸಂಸದೀಯ ಮಂಡಳಿ ಇದೇ 10ರಂದು ಮಾಡಿದ್ದ ಶಿಫಾರಸು ಆಧಾರದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡಿದರು.<br /> <br /> ಕಾಂಗ್ರೆಸ್ನಲ್ಲಿ ಟಿಕೆಟ್ ದೊರೆಯದೆ ಬೇಸತ್ತಿರುವ ಕೆಲ ಮುಖಂಡರು ಜೆಡಿಎಸ್ ಸೇರಲಿದ್ದಾರೆ. ಇದಾದ ನಂತರ ಉಳಿದ 13 ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.<br /> <br /> ಕೆಜೆಪಿ ತೊರೆದು ಗುರುವಾರ ಅಧಿಕೃತವಾಗಿ ಜೆಡಿಎಸ್ ಸೇರಿದ ಕೇಂದ್ರದ ಮಾಜಿ ಸಚಿವ ವಿ.ಧನಂಜಯಕುಮಾರ್ಗೆ (ಉಡುಪಿ – ಚಿಕ್ಕಮಗಳೂರು) ಮೊದಲ ಪಟ್ಟಿಯಲ್ಲೇ ಟಿಕೆಟ್ ನೀಡಲಾಗಿದೆ.<br /> <br /> ದೇವೇಗೌಡ ಹಾಸನದಿಂದ ಸ್ಪರ್ಧಿಸುವರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎ.ಕೃಷ್ಣಪ್ಪ ತುಮಕೂರಿನಿಂದ ಕಣಕ್ಕೆ ಇಳಿದಿದ್ದಾರೆ.<br /> ಕಾಂಗ್ರೆಸ್ನಲ್ಲಿ ಟಿಕೆಟ್ ದೊರೆಯದೆ ಹತಾಶರಾಗಿರುವ ಹಿರಿಯ ಮುಖಂಡ ಸಿ.ಕೆ.ಜಾಫರ್ ಷರೀಫ್, ಮಾಜಿ ಸಂಸದ ಎಚ್.ಟಿ.ಸಾಂಗ್ಲಿಯಾನ, ಮಾಜಿ ಶಾಸಕ ಮಹಿಮ ಪಟೇಲ್ ಜೆಡಿಎಸ್ ಸೇರುವುದು ಬಹುತೇಕ ಖಚಿತವಾಗಿದೆ.<br /> <br /> ಮೈಸೂರಿನಿಂದ ಜಾಫರ್ ಷರೀಫ್, ಬೆಂಗಳೂರು ಸೆಂಟ್ರಲ್ನಿಂದ ಸಾಂಗ್ಲಿಯಾನ, ದಾವಣಗೆರೆಯಿಂದ ಮಹಿಮ ಪಟೇಲ್ ಕಣಕ್ಕೆ ಇಳಿಯಲಿದ್ದಾರೆ ಎಂದು ಗೊತ್ತಾಗಿದೆ.<br /> ಕಾಂಗ್ರೆಸ್ ಟಿಕೆಟ್ಗೆ ಪ್ರಯತ್ನಿಸಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಕೆ.ಸಿ.ರಾಮಮೂರ್ತಿ ಅವರೂ ಜೆಡಿಎಸ್ಗೆ ಸೇರಿ, ಬೆಂಗಳೂರು ಉತ್ತರದಿಂದ ಸ್ಪರ್ಧಿಸಲಿದ್ದಾರೆ ಎಂದು ತಿಳಿದು ಬಂದಿದೆ.<br /> <br /> ‘ಜಾಫರ್ ಷರೀಫ್, ಸಾಂಗ್ಲಿಯಾನ ಅವರೊಂದಿಗೆ ಚರ್ಚೆ ನಡೆದಿರುವುದು ನಿಜ. ಇದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ. 2–3 ದಿನದಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ’ ಎಂದು ದೇವೇಗೌಡ ಹೇಳಿದರು.<br /> <br /> ‘ನಮ್ಮದು ಜಾತ್ಯತೀತ ಪಕ್ಷ. ಎಲ್ಲ ಧರ್ಮ, ಸಮುದಾಯದವರಿಗೆ ಅವಕಾಶ ನೀಡುತ್ತಾ ಬಂದಿದ್ದೇವೆ. ಪಕ್ಷದ ತತ್ವ – ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತ ಇದೆ’ ಎಂದರು.<br /> ‘ಹಾಸನ ಕ್ಷೇತ್ರದಲ್ಲಿ 2–3 ದಿನ ಮಾತ್ರ ಇರುತ್ತೇನೆ. ಅಲ್ಲಿನ ಜನರ ಮೇಲೆ ನನಗೆ ವಿಶ್ವಾಸವಿದೆ. ಹಾಸನದ ಬಗ್ಗೆ ಭೀತಿ ಇಲ್ಲ’ ಎಂದು ತಿಳಿಸಿದರು.<br /> ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷ ಎಚ್.ಸಿ.ನೀರಾವರಿ, ಮುಖಂಡರಾದ ಅಬ್ದುಲ್ ಅಜೀಂ, ರಮೇಶ್ಬಾಬು ಉಪಸ್ಥಿತರಿದ್ದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ 15 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜೆಡಿಎಸ್ ಅಧಿಕೃತವಾಗಿ ಗುರುವಾರ ಬಿಡುಗಡೆ ಮಾಡಿದೆ.<br /> ಪಕ್ಷದ ಸಂಸದೀಯ ಮಂಡಳಿ ಇದೇ 10ರಂದು ಮಾಡಿದ್ದ ಶಿಫಾರಸು ಆಧಾರದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡಿದರು.<br /> <br /> ಕಾಂಗ್ರೆಸ್ನಲ್ಲಿ ಟಿಕೆಟ್ ದೊರೆಯದೆ ಬೇಸತ್ತಿರುವ ಕೆಲ ಮುಖಂಡರು ಜೆಡಿಎಸ್ ಸೇರಲಿದ್ದಾರೆ. ಇದಾದ ನಂತರ ಉಳಿದ 13 ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.<br /> <br /> ಕೆಜೆಪಿ ತೊರೆದು ಗುರುವಾರ ಅಧಿಕೃತವಾಗಿ ಜೆಡಿಎಸ್ ಸೇರಿದ ಕೇಂದ್ರದ ಮಾಜಿ ಸಚಿವ ವಿ.ಧನಂಜಯಕುಮಾರ್ಗೆ (ಉಡುಪಿ – ಚಿಕ್ಕಮಗಳೂರು) ಮೊದಲ ಪಟ್ಟಿಯಲ್ಲೇ ಟಿಕೆಟ್ ನೀಡಲಾಗಿದೆ.<br /> <br /> ದೇವೇಗೌಡ ಹಾಸನದಿಂದ ಸ್ಪರ್ಧಿಸುವರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎ.ಕೃಷ್ಣಪ್ಪ ತುಮಕೂರಿನಿಂದ ಕಣಕ್ಕೆ ಇಳಿದಿದ್ದಾರೆ.<br /> ಕಾಂಗ್ರೆಸ್ನಲ್ಲಿ ಟಿಕೆಟ್ ದೊರೆಯದೆ ಹತಾಶರಾಗಿರುವ ಹಿರಿಯ ಮುಖಂಡ ಸಿ.ಕೆ.ಜಾಫರ್ ಷರೀಫ್, ಮಾಜಿ ಸಂಸದ ಎಚ್.ಟಿ.ಸಾಂಗ್ಲಿಯಾನ, ಮಾಜಿ ಶಾಸಕ ಮಹಿಮ ಪಟೇಲ್ ಜೆಡಿಎಸ್ ಸೇರುವುದು ಬಹುತೇಕ ಖಚಿತವಾಗಿದೆ.<br /> <br /> ಮೈಸೂರಿನಿಂದ ಜಾಫರ್ ಷರೀಫ್, ಬೆಂಗಳೂರು ಸೆಂಟ್ರಲ್ನಿಂದ ಸಾಂಗ್ಲಿಯಾನ, ದಾವಣಗೆರೆಯಿಂದ ಮಹಿಮ ಪಟೇಲ್ ಕಣಕ್ಕೆ ಇಳಿಯಲಿದ್ದಾರೆ ಎಂದು ಗೊತ್ತಾಗಿದೆ.<br /> ಕಾಂಗ್ರೆಸ್ ಟಿಕೆಟ್ಗೆ ಪ್ರಯತ್ನಿಸಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಕೆ.ಸಿ.ರಾಮಮೂರ್ತಿ ಅವರೂ ಜೆಡಿಎಸ್ಗೆ ಸೇರಿ, ಬೆಂಗಳೂರು ಉತ್ತರದಿಂದ ಸ್ಪರ್ಧಿಸಲಿದ್ದಾರೆ ಎಂದು ತಿಳಿದು ಬಂದಿದೆ.<br /> <br /> ‘ಜಾಫರ್ ಷರೀಫ್, ಸಾಂಗ್ಲಿಯಾನ ಅವರೊಂದಿಗೆ ಚರ್ಚೆ ನಡೆದಿರುವುದು ನಿಜ. ಇದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ. 2–3 ದಿನದಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ’ ಎಂದು ದೇವೇಗೌಡ ಹೇಳಿದರು.<br /> <br /> ‘ನಮ್ಮದು ಜಾತ್ಯತೀತ ಪಕ್ಷ. ಎಲ್ಲ ಧರ್ಮ, ಸಮುದಾಯದವರಿಗೆ ಅವಕಾಶ ನೀಡುತ್ತಾ ಬಂದಿದ್ದೇವೆ. ಪಕ್ಷದ ತತ್ವ – ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತ ಇದೆ’ ಎಂದರು.<br /> ‘ಹಾಸನ ಕ್ಷೇತ್ರದಲ್ಲಿ 2–3 ದಿನ ಮಾತ್ರ ಇರುತ್ತೇನೆ. ಅಲ್ಲಿನ ಜನರ ಮೇಲೆ ನನಗೆ ವಿಶ್ವಾಸವಿದೆ. ಹಾಸನದ ಬಗ್ಗೆ ಭೀತಿ ಇಲ್ಲ’ ಎಂದು ತಿಳಿಸಿದರು.<br /> ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷ ಎಚ್.ಸಿ.ನೀರಾವರಿ, ಮುಖಂಡರಾದ ಅಬ್ದುಲ್ ಅಜೀಂ, ರಮೇಶ್ಬಾಬು ಉಪಸ್ಥಿತರಿದ್ದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>