<p><strong>ದೇವನಹಳ್ಳಿ: </strong> ‘ಮತದಾನದ ಹಕ್ಕು ಮತ್ತು ಕರ್ತವ್ಯದ ಕುರಿತು ಪ್ರತಿಯೊಬ್ಬರು ಜಾಗೃತರಾಗಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮುನಿರಾಜು ತಿಳಿಸಿದರು.<br /> ದೇವನಹಳ್ಳಿ ನಳಂದ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ನಳಂದ ಶಿಕ್ಷಣ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ಮತಜಾಗೃತಿ ಅಭಿಯಾನ ದಲ್ಲಿ ಅವರು ಮಾತನಾಡಿದರು.<br /> <br /> ಗ್ರಾಮಾಂತರ ಪ್ರೌಢಶಾಲೆ ಮುಖ್ಯಶಿಕ್ಷಕ ಬಿ.ಎನ್.ಕೃಷ್ಣಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ನಳಂದ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯ ವೆಂಕಟೇಶ್ ಗೌಡ, ಉಪನ್ಯಾಸಕ ಕೃಷ್ಣಮೂರ್ತಿ, ಶಿಕ್ಷಕ ಮಂಜುನಾಥ್, ಕೆ.ಎಂ.ಕೃಷ್ಣಮೂರ್ತಿ, ವೈ.ವಿ.ಚಂದ್ರಶೇಖರ್, ಮುನಿರಾಜು, ಹನುಮಂತಪ್ಪ, ಸಿ.ಆರ್.ಪಿ ನಾಗೇಶ್, ಮುನಿವೀರಪ್ಪ, ರವೀಂದ್ರ, ನಾರಾಯಣಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.<br /> <br /> ಕಾರ್ಯಕ್ರಮದ ನಂತರ ಕಾಲೇಜು ಆವರಣದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿ ಮಾನವ ಸರಪಳಿ ನಿರ್ಮಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ: </strong> ‘ಮತದಾನದ ಹಕ್ಕು ಮತ್ತು ಕರ್ತವ್ಯದ ಕುರಿತು ಪ್ರತಿಯೊಬ್ಬರು ಜಾಗೃತರಾಗಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮುನಿರಾಜು ತಿಳಿಸಿದರು.<br /> ದೇವನಹಳ್ಳಿ ನಳಂದ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ನಳಂದ ಶಿಕ್ಷಣ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ಮತಜಾಗೃತಿ ಅಭಿಯಾನ ದಲ್ಲಿ ಅವರು ಮಾತನಾಡಿದರು.<br /> <br /> ಗ್ರಾಮಾಂತರ ಪ್ರೌಢಶಾಲೆ ಮುಖ್ಯಶಿಕ್ಷಕ ಬಿ.ಎನ್.ಕೃಷ್ಣಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ನಳಂದ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯ ವೆಂಕಟೇಶ್ ಗೌಡ, ಉಪನ್ಯಾಸಕ ಕೃಷ್ಣಮೂರ್ತಿ, ಶಿಕ್ಷಕ ಮಂಜುನಾಥ್, ಕೆ.ಎಂ.ಕೃಷ್ಣಮೂರ್ತಿ, ವೈ.ವಿ.ಚಂದ್ರಶೇಖರ್, ಮುನಿರಾಜು, ಹನುಮಂತಪ್ಪ, ಸಿ.ಆರ್.ಪಿ ನಾಗೇಶ್, ಮುನಿವೀರಪ್ಪ, ರವೀಂದ್ರ, ನಾರಾಯಣಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.<br /> <br /> ಕಾರ್ಯಕ್ರಮದ ನಂತರ ಕಾಲೇಜು ಆವರಣದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿ ಮಾನವ ಸರಪಳಿ ನಿರ್ಮಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>