ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯ 1559 ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನಿಲ್ಕುಮಾರ್ ಝಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮತದಾನದ ದಿನವಾದ ಏ.17ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲ ಬಗೆಯ ಖಾಸಗಿ ಸಂಸ್ಥೆಗಳು ಸಿಬ್ಬಂದಿಗೆ ವೇತನಸಹಿತ ರಜೆ ನೀಡುವ ಮೂಲಕ ಮತ ಚಲಾಯಿಸಲು ಅವಕಾಶ ಮಾಡಿಕೊಡಬೇಕು ಎಂದು ಸೂಚಿಸಿರುವುದಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬಹಿರಂಗ ಪ್ರಚಾರ ಅಂತ್ಯವಾಗಿರುವುದರಿಂದ ಕಣದಲ್ಲಿರುವ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳ ಮುಖಂ-ಡರು ಪತ್ರಿಕಾಗೋಷ್ಠಿ ನಡೆಸಿ ಮತ ನೀಡುವಂತೆ ಮನವಿ ಮಾಡಲು ಅವಕಾಶ ಇಲ್ಲ. ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಚರ್ಚೆಗಳಿಗೂ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.
ಬುಧವಾರ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲು ಅವಕಾಶ ಇದೆ. ಆದರೆ, ಸಾರ್ವಜನಿಕರಿಗೆ ತೊಂದರೆ ಆಗದಂತೆ 3–4 ಜನರು ಮಾತ್ರ ಪ್ರಚಾರದಲ್ಲಿ ಭಾಗವಹಿಸಬೇಕು ಎಂದರು.
ಎಲ್ಲಿ ಎಷ್ಟು ವಶ?
ಎಚ್.ಡಿ.ಕೋಟೆ ₨ 8.55 ಲಕ್ಷ
ಲಿಂಗಸಗೂರು ₨ 27 ಲಕ್ಷ
ಬೀದರ್ ₨ 4.23 ಲಕ್ಷ
ಬಳ್ಳಾರಿ ₨ 4 ಲಕ್ಷ
ಧಾರವಾಡ ₨ 1.29 ಲಕ್ಷ
ಇದುವರೆಗೆ ಒಟ್ಟು ₨ 21.95 ಕೋಟಿ ವಶ
*₨ 2.82 ಕೋಟಿ ಮೌಲ್ಯದ 44,924 ಲೀಟರ್ ಮದ್ಯವಶ
*₨ 2.80 ಕೋಟಿ ಮೌಲ್ಯದ ಸೀರೆ, ವಾಚ್, ಕುಕ್ಕರ್ ಇತ್ಯಾದಿ ಸಾಮಗ್ರಿಗಳ ವಶ