<p><strong>ಮುಂಬೈ:</strong>ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು 2017ರ ಪುರಸಭೆ ಚುನಾವಣೆ ವೇಳೆ ಟೀಕಿಸಿದ್ದ ಸಂಸದಕಿರಿತ್ ಸೋಮಯ್ಯ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ.</p>.<p>ಸೋಮಯ್ಯ ಬದಲಿಗೆ ಮುಂಬೈ ಈಶಾನ್ಯ ಕ್ಷೇತ್ರದಿಂದ ಕಾರ್ಪೊರೇಟರ್ ಮನೋಜ್ ಕೋಟಕ್ ಅವರನ್ನು ಕಣಕ್ಕಿಳಿಸಲಾಗಿದೆ.ಕಿರಿತ್ ಸೋಮಯ್ಯ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದು ಮೂರು ವಾರಗಳ ಹಿಂದೆಯೇ ಪ್ರಚಾರವನ್ನೂ ಆರಂಭಿಸಿದ್ದರು.</p>.<p>ಮುಂಬೈ ಈಶಾನ್ಯ ಕ್ಷೇತ್ರದಲ್ಲಿ ಸೋಮಯ್ಯ ಅವರಿಗೆ ಟಿಕೆಟ್ ನೀಡುವುದನ್ನು ಶಿವಸೇನಾ ತೀವ್ರವಾಗಿ ವಿರೋಧಿಸಿತ್ತು. ಹೀಗಾಗಿ ಮೈತ್ರಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಪರ್ಯಾಯ ಅಭ್ಯರ್ಥಿಗೆ ಅವಕಾಶ ನೀಡಿದೆ.</p>.<p>ಪುರಸಭೆ ಚುನಾವಣೆ ವೇಳೆ ಸೋಮಯ್ಯ ಅವರು ಠಾಕ್ರೆ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಬಳಿಕ ಬಿಜೆಪಿ–ಶಿವಸೇನಾ ನಡುವಣ ಮೈತ್ರಿ ಹಳಸಿತ್ತು. ಒಂದು ಹಂತದಲ್ಲಿ, ಲೋಕಸಭೆ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸುವುದಾಗಿಯೂ ಶಿವಸೇನಾ ಹೇಳಿತ್ತು.</p>.<p>ಇತ್ತೀಚೆಗೆ ಉಭಯ ಪಕ್ಷಗಳೂ ಜತೆಯಾಗಿ ಲೋಕಸಭೆ ಚುನಾವಣೆಯ ಎದುರಿಸುವುದಾಗಿ ಘೋಷಿಸಿದ್ದವು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಗುಜರಾತ್ನ ಗಾಂಧಿನಗರದಲ್ಲಿ ನಾಮಪತ್ರ ಸಲ್ಲಿಸುವ ವೇಳೆ ಉದ್ಧವ್ ಠಾಕ್ರೆ ಸಹ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong>ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು 2017ರ ಪುರಸಭೆ ಚುನಾವಣೆ ವೇಳೆ ಟೀಕಿಸಿದ್ದ ಸಂಸದಕಿರಿತ್ ಸೋಮಯ್ಯ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ.</p>.<p>ಸೋಮಯ್ಯ ಬದಲಿಗೆ ಮುಂಬೈ ಈಶಾನ್ಯ ಕ್ಷೇತ್ರದಿಂದ ಕಾರ್ಪೊರೇಟರ್ ಮನೋಜ್ ಕೋಟಕ್ ಅವರನ್ನು ಕಣಕ್ಕಿಳಿಸಲಾಗಿದೆ.ಕಿರಿತ್ ಸೋಮಯ್ಯ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದು ಮೂರು ವಾರಗಳ ಹಿಂದೆಯೇ ಪ್ರಚಾರವನ್ನೂ ಆರಂಭಿಸಿದ್ದರು.</p>.<p>ಮುಂಬೈ ಈಶಾನ್ಯ ಕ್ಷೇತ್ರದಲ್ಲಿ ಸೋಮಯ್ಯ ಅವರಿಗೆ ಟಿಕೆಟ್ ನೀಡುವುದನ್ನು ಶಿವಸೇನಾ ತೀವ್ರವಾಗಿ ವಿರೋಧಿಸಿತ್ತು. ಹೀಗಾಗಿ ಮೈತ್ರಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಪರ್ಯಾಯ ಅಭ್ಯರ್ಥಿಗೆ ಅವಕಾಶ ನೀಡಿದೆ.</p>.<p>ಪುರಸಭೆ ಚುನಾವಣೆ ವೇಳೆ ಸೋಮಯ್ಯ ಅವರು ಠಾಕ್ರೆ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಬಳಿಕ ಬಿಜೆಪಿ–ಶಿವಸೇನಾ ನಡುವಣ ಮೈತ್ರಿ ಹಳಸಿತ್ತು. ಒಂದು ಹಂತದಲ್ಲಿ, ಲೋಕಸಭೆ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸುವುದಾಗಿಯೂ ಶಿವಸೇನಾ ಹೇಳಿತ್ತು.</p>.<p>ಇತ್ತೀಚೆಗೆ ಉಭಯ ಪಕ್ಷಗಳೂ ಜತೆಯಾಗಿ ಲೋಕಸಭೆ ಚುನಾವಣೆಯ ಎದುರಿಸುವುದಾಗಿ ಘೋಷಿಸಿದ್ದವು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಗುಜರಾತ್ನ ಗಾಂಧಿನಗರದಲ್ಲಿ ನಾಮಪತ್ರ ಸಲ್ಲಿಸುವ ವೇಳೆ ಉದ್ಧವ್ ಠಾಕ್ರೆ ಸಹ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>