ಬಿಜೆಪಿ ಈಗ ತನ್ನ ಮೂಲ ತತ್ವಗಳಿಂದ ದೂರ ಸರಿದಿದೆ. ವರ್ಷಗಳಿಂದ ರೂಢಿಸಿಕೊಂಡು ಬಂದ ಸಿದ್ಧಾಂತಗಳನ್ನು ಕೈಬಿಡಲಾಗಿದೆ. ಹಾಗಾಗಿಯೇ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಬೇಕಾಯಿತು ಎಂದು ಉದಯ್ ಸಿಂಗ್ ಹೇಳಿದ್ದಾರೆ. 2004ರವರೆಗೆ ಅವರು ಕಾಂಗ್ರೆಸ್ನಲ್ಲಿಯೇ ಇದ್ದರು. ಈಗ, ತಾವು ಮನೆಗೆ ಮರಳಿದಂತಾಗಿದೆ ಎಂದು ಅವರು ಹೇಳಿದ್ದಾರೆ.