ನವದೆಹಲಿ:ದೆಹಲಿ ಮತ್ತು ಉತ್ತರ ಭಾರತದ ಆರು ರಾಜ್ಯಗಳ 59 ಲೋಕಸಭಾ ಕ್ಷೇತ್ರಗಳಿಗೆ 6ನೇ ಹಂತದ ಮತದಾನ ಭಾನುವಾರ ಬೆಳಿಗ್ಗೆ ಆರಂಭವಾಗಿದ್ದು, 10 ಗಂಟೆ ವೇಳೆಗೆ ಶೇ 10.8ರಷ್ಟು ಮತದಾನವಾಗಿದೆ.
ರಾಷ್ಟ್ರಪತಿ ರಾಮನಾಥ ಕೋವಿಂದ್, ಕ್ರಿಕೆಟಿಗ ವಿರಾಟ್ ಕೊಹ್ಲಿ, ಪೂರ್ವ ದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್, ಈಶಾನ್ಯ ದೆಹಲಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶೀಲಾ ದೀಕ್ಷಿತ್ ಸೇರಿದಂತೆ ಅನೇಕ ಗಣ್ಯರು ಬೆಳಿಗ್ಗೆಯೇ ಹಕ್ಕು ಚಲಾಯಿಸಿದರು.
ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ:ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಈ ವೇಳೆ ನಡೆದ ಘರ್ಷಣೆಯಲ್ಲಿ ಸಿಆರ್ಪಿಎಫ್ನಒಬ್ಬ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.