<p><strong>ಚಾಮರಾಜನಗರ: </strong>‘ನಗರದ ಶಿವಕುಮಾರಸ್ವಾಮಿಭವನದಲ್ಲಿ ಮಾರ್ಚ್ 31ರಂದು ಸಂಜೆ 4 ಗಂಟೆಗೆ ‘ಮೇ ಭಿ ಚೌಕಿದಾರ್’ (ನಾನು ಕೂಡ ಕಾವಲುಗಾರ) ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನೇರವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ’ ಎಂದು ಗುಂಡ್ಲುಪೇಟೆ ಶಾಸಕ ಎಸ್.ನಿರಂಜನಕುಮಾರ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಈ ಕಾರ್ಯಕ್ರಮವು ದೇಶದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ. ಇದರಲ್ಲಿ ಎಲ್ಲರೂ ಭಾಗವಹಿಸಬಹುದು. ಯುವಸಮುದಾಯ, ರೈತರು, ಮಹಿಳೆಯರು ಸೇರಿದಂತೆ ರಾಷ್ಟ್ರದ 60 ಲಕ್ಷಕ್ಕೂ ಹೆಚ್ಚು ಮಂದಿ ನಮೋ ಆ್ಯಪ್ ಮೂಲಕ ‘ಮೇ ಭಿ ಚೌಕಿದಾರ್’ ಎಂದುತಮ್ಮನ್ನು ತಾವುಘೋಷಣೆಮಾಡಿಕೊಂಡಿದ್ದಾರೆ’ ಎಂದರು.</p>.<p>‘ದೇಶದ ಎಲ್ಲ ವರ್ಗದ ಜನರು, ವಿಚಾರವಂತರು, ಅನುಭವಸ್ಥರು ನಮ್ಮ ಹಾಗೂ ದೇಶದ ರಕ್ಷಣೆಗೆ ಮೋದಿ ಬೇಕು ಎನ್ನುತ್ತಿದ್ದಾರೆ. ದೇಶದ ಆರ್ಥಿಕ ಸದೃಢವಾಗಿ ಮುಂದುವರಿಯಲು ಮೋದಿ ಸರ್ಕಾರ ಬೇಕು. ಮೋದಿಗಾಗಿ ಮತಚಲಾಯಿಸಬೇಕು ಎನ್ನುತ್ತಿದ್ದಾರೆ’ ಎಂದು ಹೇಳಿದರು.</p>.<p>ಮೋದಿ ಅವರ ನೇರ ಕಾರ್ಯಕ್ರಮದಲ್ಲಿ ವಿಧಾನಸಭಾ ಕ್ಷೇತ್ರದ ಎಲ್ಲರೂ ಭಾಗವಹಿಸಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ನಾಗೇಂದ್ರಸ್ವಾಮಿ, ನೂರೊಂದು ಶೆಟ್ಟಿ, ಮುಖಂಡರಾದ ಮಲ್ಲೇಶ್, ಗೋವಿಂದರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>‘ನಗರದ ಶಿವಕುಮಾರಸ್ವಾಮಿಭವನದಲ್ಲಿ ಮಾರ್ಚ್ 31ರಂದು ಸಂಜೆ 4 ಗಂಟೆಗೆ ‘ಮೇ ಭಿ ಚೌಕಿದಾರ್’ (ನಾನು ಕೂಡ ಕಾವಲುಗಾರ) ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನೇರವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ’ ಎಂದು ಗುಂಡ್ಲುಪೇಟೆ ಶಾಸಕ ಎಸ್.ನಿರಂಜನಕುಮಾರ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಈ ಕಾರ್ಯಕ್ರಮವು ದೇಶದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ. ಇದರಲ್ಲಿ ಎಲ್ಲರೂ ಭಾಗವಹಿಸಬಹುದು. ಯುವಸಮುದಾಯ, ರೈತರು, ಮಹಿಳೆಯರು ಸೇರಿದಂತೆ ರಾಷ್ಟ್ರದ 60 ಲಕ್ಷಕ್ಕೂ ಹೆಚ್ಚು ಮಂದಿ ನಮೋ ಆ್ಯಪ್ ಮೂಲಕ ‘ಮೇ ಭಿ ಚೌಕಿದಾರ್’ ಎಂದುತಮ್ಮನ್ನು ತಾವುಘೋಷಣೆಮಾಡಿಕೊಂಡಿದ್ದಾರೆ’ ಎಂದರು.</p>.<p>‘ದೇಶದ ಎಲ್ಲ ವರ್ಗದ ಜನರು, ವಿಚಾರವಂತರು, ಅನುಭವಸ್ಥರು ನಮ್ಮ ಹಾಗೂ ದೇಶದ ರಕ್ಷಣೆಗೆ ಮೋದಿ ಬೇಕು ಎನ್ನುತ್ತಿದ್ದಾರೆ. ದೇಶದ ಆರ್ಥಿಕ ಸದೃಢವಾಗಿ ಮುಂದುವರಿಯಲು ಮೋದಿ ಸರ್ಕಾರ ಬೇಕು. ಮೋದಿಗಾಗಿ ಮತಚಲಾಯಿಸಬೇಕು ಎನ್ನುತ್ತಿದ್ದಾರೆ’ ಎಂದು ಹೇಳಿದರು.</p>.<p>ಮೋದಿ ಅವರ ನೇರ ಕಾರ್ಯಕ್ರಮದಲ್ಲಿ ವಿಧಾನಸಭಾ ಕ್ಷೇತ್ರದ ಎಲ್ಲರೂ ಭಾಗವಹಿಸಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ನಾಗೇಂದ್ರಸ್ವಾಮಿ, ನೂರೊಂದು ಶೆಟ್ಟಿ, ಮುಖಂಡರಾದ ಮಲ್ಲೇಶ್, ಗೋವಿಂದರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>