ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೆ ಸಂಬಂದಿಸಿದಂತೆ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಟೀಕೆಗೆ ಪ್ರತಿಕ್ರಿಯಿಸಿ, ‘ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಮ್ಮ ಅಭಿಮಾನಿಗಳು, ಬೆಂಬಲಿಗರ ಮನೆ ಮೇಲೆ ದಾಳಿ ನಡೆಸಿದರಲ್ಲ ಅವರ ಮನೆಯಲ್ಲಿ ನೋಟುಗಳಾಗಲಿ, ನೋಟಿನ ಯಂತ್ರವಾಗಲಿ ಸಿಗಲಿಲ್ಲ. ಈಶ್ವರಪ್ಪ ಮನೆಯಲ್ಲಿ ನೋಟಿನ ಯಂತ್ರ ಸಿಕ್ಕಿತ್ತು’ ಎಂದು ವ್ಯಂಗ್ಯವಾಡಿದರು.