<p><strong>ವಿಜಯಪುರ:</strong>‘ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಮೇಲೆ ಪತ್ರಕರ್ತರ ಸಮಕ್ಷಮವೇ ಹಲ್ಲೆ ಯತ್ನ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮಧ್ಯಪ್ರವೇಶಿಸಬೇಕಿದೆ’ ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಆಗ್ರಹಿಸಿದರು.</p>.<p>‘ಆಡಳಿತಾರೂಢರ ಹತಾಶೆಯ ಮನಸ್ಥಿತಿಯಿದು. ಟೀಕಿಸುವುದು ವಿರೋಧ ಪಕ್ಷದವರ ಹಕ್ಕು. ಸೂಕ್ತ ಉತ್ತರ ನೀಡುವುದನ್ನು ಬಿಟ್ಟು ಹಲ್ಲೆಗೆ ಮುಂದಾಗಿದ್ದು, ಪ್ರಜಾಪ್ರಭುತ್ವ, ಸಂವಿಧಾನದ ಆಶಯದ ಮೇಲೆ ನಡೆಸಿದ ದಾಳಿ’ ಎಂದು ಭಾನುವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p><strong>* ಇದನ್ನೂ ಓದಿ:<a href="https://www.prajavani.net/mla-nadahalli-pressmeet-m-b-628489.html">ಗೃಹಸಚಿವ ಎಂ.ಬಿ.ಪಾಟೀಲ ಬೆಂಬಲಿಗರಿಂದ ದಾಂಧಲೆ: ಶಾಸಕ ನಡಹಳ್ಳಿ ಮೇಲೆ ಹಲ್ಲೆ ಯತ್ನ</a></strong></p>.<p>‘ಚುನಾವಣೆ ಸಮಯದಲ್ಲಿ ರಾಜ್ಯದ ಆಡಳಿತಗಾರರಿಂದ ಭಯ ಹುಟ್ಟಿಸುವ ಕೆಲಸ ನಡೆದಿದೆ. ರಾಜ್ಯಪಾಲರು ಮಧ್ಯಪ್ರವೇಶಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರವಾದ ವರದಿ ಪಡೆದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಆದೇಶಿಸಬೇಕು’ ಎಂದು ಶಹಾಪುರ ಆಗ್ರಹಿಸಿದರು.</p>.<p>‘ರಾಜ್ಯ ಸರ್ಕಾರ ತನ್ನ ಕರ್ತವ್ಯ ನಿಭಾಯಿಸುವಲ್ಲಿ ವಿಫಲವಾಗಿದೆ. ಮುಖ್ಯಮಂತ್ರಿಯೇ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಎಂ.ಬಿ.ಪಾಟೀಲ ಹೆಸರಿನಲ್ಲಿ ಬೆಂಬಲಿಗರು ದಾಂದಲೆ ನಡೆಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ರಾಜ್ಯಪಾಲರು ಗಂಭೀರವಾಗಿ ಆಲೋಚಿಸಬೇಕಿದೆ’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong>‘ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಮೇಲೆ ಪತ್ರಕರ್ತರ ಸಮಕ್ಷಮವೇ ಹಲ್ಲೆ ಯತ್ನ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮಧ್ಯಪ್ರವೇಶಿಸಬೇಕಿದೆ’ ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಆಗ್ರಹಿಸಿದರು.</p>.<p>‘ಆಡಳಿತಾರೂಢರ ಹತಾಶೆಯ ಮನಸ್ಥಿತಿಯಿದು. ಟೀಕಿಸುವುದು ವಿರೋಧ ಪಕ್ಷದವರ ಹಕ್ಕು. ಸೂಕ್ತ ಉತ್ತರ ನೀಡುವುದನ್ನು ಬಿಟ್ಟು ಹಲ್ಲೆಗೆ ಮುಂದಾಗಿದ್ದು, ಪ್ರಜಾಪ್ರಭುತ್ವ, ಸಂವಿಧಾನದ ಆಶಯದ ಮೇಲೆ ನಡೆಸಿದ ದಾಳಿ’ ಎಂದು ಭಾನುವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p><strong>* ಇದನ್ನೂ ಓದಿ:<a href="https://www.prajavani.net/mla-nadahalli-pressmeet-m-b-628489.html">ಗೃಹಸಚಿವ ಎಂ.ಬಿ.ಪಾಟೀಲ ಬೆಂಬಲಿಗರಿಂದ ದಾಂಧಲೆ: ಶಾಸಕ ನಡಹಳ್ಳಿ ಮೇಲೆ ಹಲ್ಲೆ ಯತ್ನ</a></strong></p>.<p>‘ಚುನಾವಣೆ ಸಮಯದಲ್ಲಿ ರಾಜ್ಯದ ಆಡಳಿತಗಾರರಿಂದ ಭಯ ಹುಟ್ಟಿಸುವ ಕೆಲಸ ನಡೆದಿದೆ. ರಾಜ್ಯಪಾಲರು ಮಧ್ಯಪ್ರವೇಶಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರವಾದ ವರದಿ ಪಡೆದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಆದೇಶಿಸಬೇಕು’ ಎಂದು ಶಹಾಪುರ ಆಗ್ರಹಿಸಿದರು.</p>.<p>‘ರಾಜ್ಯ ಸರ್ಕಾರ ತನ್ನ ಕರ್ತವ್ಯ ನಿಭಾಯಿಸುವಲ್ಲಿ ವಿಫಲವಾಗಿದೆ. ಮುಖ್ಯಮಂತ್ರಿಯೇ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಎಂ.ಬಿ.ಪಾಟೀಲ ಹೆಸರಿನಲ್ಲಿ ಬೆಂಬಲಿಗರು ದಾಂದಲೆ ನಡೆಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ರಾಜ್ಯಪಾಲರು ಗಂಭೀರವಾಗಿ ಆಲೋಚಿಸಬೇಕಿದೆ’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>