<p><strong>ಕೋಲಾರ: </strong>‘ಜಿಲ್ಲೆಯ ಸಮಸ್ಯೆ ಬಗೆಹರಿಸುವಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ವಿಫಲರಾಗಿದ್ದು, ಅವರಿಗೆ ಕ್ಷೇತ್ರದ ಹಿತಕ್ಕಿಂತ ಕುಟುಂಬದ ಹಿತಾಸಕ್ತಿಯೇ ಮುಖ್ಯವಾಗಿದೆ’ ಎಂದು ಪಕ್ಷೇತರ ಅಭ್ಯರ್ಥಿ ಎಂ.ಸಿ.ರಮೇಶ್ಬಾಬು ಲೇವಡಿ ಮಾಡಿದರು.</p>.<p>ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸತತ 7 ಬಾರಿ ಸಂಸದರಾಗಿರುವ ಮುನಿಯಪ್ಪರ ಕೊಡುಗೆ ಶೂನ್ಯ. ಅವರ ಅವಧಿಯಲ್ಲಿ ಮಹತ್ವದ ಯಾವುದೇ ಅಭಿವೃದ್ಧಿ ಕೆಲಸವಾಗಿಲ್ಲ’ ಎಂದು ದೂರಿದರು.</p>.<p>‘ಜಿಲ್ಲೆಯು ಸತತ ಬರಕ್ಕೆ ಸಿಲುಕಿ ನೀರು, ಕೆಲಸವಿಲ್ಲದೆ ಜನ ಉದ್ಯೋಗಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುನಿಯಪ್ಪ ಜನರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ನಾನು ರಾಜಕೀಯ ಪ್ರವೇಶಿಸಿದ್ದೇನೆ’ ಎಂದು ಹೇಳಿದರು.</p>.<p>‘ಬಿಜೆಪಿ ಸೇರಿ ಟಿಕೆಟ್ ನಿರೀಕ್ಷೆಯಲ್ಲಿದ್ದೆ. ನನಗೆ ಚುನಾವಣೆ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಪಕ್ಷದ ವರಿಷ್ಠರು ಭರವಸೆ ಕೊಟ್ಟಿದ್ದರು. ಆದರೆ, ಅಂತಿಮ ಕ್ಷಣದಲ್ಲಿ ಕೆಲ ಕಾಣದ ಶಕ್ತಿಗಳ ಕೈವಾಡದಿಂದ ಟಿಕೆಟ್ ತಪ್ಪಿತು. ಹೀಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ವರ್ಧಿಸಿದ್ದೇನೆ’ ಎಂದು ವಿವರಿಸಿದರು.</p>.<p>‘ಮುಖ್ಯವಾಗಿ ಜಿಲ್ಲೆಯಲ್ಲಿ ಭ್ರಷ್ಟಾಚಾರ ನಿರ್ಮೂಲನೆ. ಕುಡಿಯುವ ನೀರು, ನಿರುದ್ಯೋಗ ಮತ್ತು ಕೃಷಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಕನಸಿದೆ. ಎಲ್ಲರಿಗೂ ವಸತಿ ಸೌಲಭ್ಯ ಸೇರಿದಂತೆ ಮೂಲಸೌಕರ್ಯ ಕಲ್ಪಿಸುವ ಆಶಯ ಹೊಂದಿದ್ದೇನೆ’ ಎಂದು ಮಾಹಿತಿ ನೀಡಿದರು.</p>.<p><strong>ಹಣ ಮುಖ್ಯವಾಗಿದೆ:</strong> ‘ಲೋಕಸಭೆ ಚುನಾವಣೆಗೆ ಸ್ವರ್ಧಿಸಲು ಕನಿಷ್ಠ ಅರ್ಹತೆಗಳಾದರೂ ಇರಬೇಕು. ಸ್ಥಳೀಯರಾಗಿರಬೇಕು, ವಿದ್ಯಾವಂತರಾಗಿರಬೇಕು. ಸತ್ಯ ಧರ್ಮ ಪಾಲನೆಯ ಸಜ್ಜನ ವ್ಯಕ್ತಿಯಾಗಿರಬೇಕು. ಆದರೆ, ಬಿಜೆಪಿಯು ಈ ಅರ್ಹತೆಗಳೇ ಇಲ್ಲದ ವ್ಯಕ್ತಿಗೆ ಟಿಕೆಟ್ ನೀಡಿದೆ. ಬಿಜೆಪಿ ಮುಖಂಡರಿಗೆ ಹಣವೇ ಮುಖ್ಯವಾಗಿದೆ’ ಎಂದು ಭಗತ್ ಸೇನೆ ರಾಜ್ಯ ಘಟಕದ ಕೃಷ್ಣ ಶಾನುಬೋಗ್ ಟೀಕಿಸಿದರು.</p>.<p>‘8ನೇ ಬಾರಿಗೆ ಚುನಾವಣೆಗೆ ಸ್ವರ್ಧಿಸಿರುವ ಮುನಿಯಪ್ಪ ಅವರಿಗೆ ಈ ಬಾರಿ ಸೋಲು ಕಟ್ಟಿಟ್ಟ ಬುತ್ತಿ. ಜಿಲ್ಲೆಯ ಚಿನ್ನದ ಗಣಿ, ನೀರು. ಕೃಷಿ ಸಮಸ್ಯೆ ಬಗ್ಗೆ ಅವರು ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ’ ಎಂದು ಕಿಡಿಕಾರಿದರು.</p>.<p>ಭಗತ್ ಸೇನೆ ಪಧಾಧಿಕಾರಿಗಳಾದ ರುದ್ರಪ್ಪ, ಪಟೇಲ್, ಲೋಕೇಶ್, ನಾಗರಾಜ್, ನಿಶಾಂತ್, ಮಂಜುನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಜಿಲ್ಲೆಯ ಸಮಸ್ಯೆ ಬಗೆಹರಿಸುವಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ವಿಫಲರಾಗಿದ್ದು, ಅವರಿಗೆ ಕ್ಷೇತ್ರದ ಹಿತಕ್ಕಿಂತ ಕುಟುಂಬದ ಹಿತಾಸಕ್ತಿಯೇ ಮುಖ್ಯವಾಗಿದೆ’ ಎಂದು ಪಕ್ಷೇತರ ಅಭ್ಯರ್ಥಿ ಎಂ.ಸಿ.ರಮೇಶ್ಬಾಬು ಲೇವಡಿ ಮಾಡಿದರು.</p>.<p>ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸತತ 7 ಬಾರಿ ಸಂಸದರಾಗಿರುವ ಮುನಿಯಪ್ಪರ ಕೊಡುಗೆ ಶೂನ್ಯ. ಅವರ ಅವಧಿಯಲ್ಲಿ ಮಹತ್ವದ ಯಾವುದೇ ಅಭಿವೃದ್ಧಿ ಕೆಲಸವಾಗಿಲ್ಲ’ ಎಂದು ದೂರಿದರು.</p>.<p>‘ಜಿಲ್ಲೆಯು ಸತತ ಬರಕ್ಕೆ ಸಿಲುಕಿ ನೀರು, ಕೆಲಸವಿಲ್ಲದೆ ಜನ ಉದ್ಯೋಗಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುನಿಯಪ್ಪ ಜನರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ನಾನು ರಾಜಕೀಯ ಪ್ರವೇಶಿಸಿದ್ದೇನೆ’ ಎಂದು ಹೇಳಿದರು.</p>.<p>‘ಬಿಜೆಪಿ ಸೇರಿ ಟಿಕೆಟ್ ನಿರೀಕ್ಷೆಯಲ್ಲಿದ್ದೆ. ನನಗೆ ಚುನಾವಣೆ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಪಕ್ಷದ ವರಿಷ್ಠರು ಭರವಸೆ ಕೊಟ್ಟಿದ್ದರು. ಆದರೆ, ಅಂತಿಮ ಕ್ಷಣದಲ್ಲಿ ಕೆಲ ಕಾಣದ ಶಕ್ತಿಗಳ ಕೈವಾಡದಿಂದ ಟಿಕೆಟ್ ತಪ್ಪಿತು. ಹೀಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ವರ್ಧಿಸಿದ್ದೇನೆ’ ಎಂದು ವಿವರಿಸಿದರು.</p>.<p>‘ಮುಖ್ಯವಾಗಿ ಜಿಲ್ಲೆಯಲ್ಲಿ ಭ್ರಷ್ಟಾಚಾರ ನಿರ್ಮೂಲನೆ. ಕುಡಿಯುವ ನೀರು, ನಿರುದ್ಯೋಗ ಮತ್ತು ಕೃಷಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಕನಸಿದೆ. ಎಲ್ಲರಿಗೂ ವಸತಿ ಸೌಲಭ್ಯ ಸೇರಿದಂತೆ ಮೂಲಸೌಕರ್ಯ ಕಲ್ಪಿಸುವ ಆಶಯ ಹೊಂದಿದ್ದೇನೆ’ ಎಂದು ಮಾಹಿತಿ ನೀಡಿದರು.</p>.<p><strong>ಹಣ ಮುಖ್ಯವಾಗಿದೆ:</strong> ‘ಲೋಕಸಭೆ ಚುನಾವಣೆಗೆ ಸ್ವರ್ಧಿಸಲು ಕನಿಷ್ಠ ಅರ್ಹತೆಗಳಾದರೂ ಇರಬೇಕು. ಸ್ಥಳೀಯರಾಗಿರಬೇಕು, ವಿದ್ಯಾವಂತರಾಗಿರಬೇಕು. ಸತ್ಯ ಧರ್ಮ ಪಾಲನೆಯ ಸಜ್ಜನ ವ್ಯಕ್ತಿಯಾಗಿರಬೇಕು. ಆದರೆ, ಬಿಜೆಪಿಯು ಈ ಅರ್ಹತೆಗಳೇ ಇಲ್ಲದ ವ್ಯಕ್ತಿಗೆ ಟಿಕೆಟ್ ನೀಡಿದೆ. ಬಿಜೆಪಿ ಮುಖಂಡರಿಗೆ ಹಣವೇ ಮುಖ್ಯವಾಗಿದೆ’ ಎಂದು ಭಗತ್ ಸೇನೆ ರಾಜ್ಯ ಘಟಕದ ಕೃಷ್ಣ ಶಾನುಬೋಗ್ ಟೀಕಿಸಿದರು.</p>.<p>‘8ನೇ ಬಾರಿಗೆ ಚುನಾವಣೆಗೆ ಸ್ವರ್ಧಿಸಿರುವ ಮುನಿಯಪ್ಪ ಅವರಿಗೆ ಈ ಬಾರಿ ಸೋಲು ಕಟ್ಟಿಟ್ಟ ಬುತ್ತಿ. ಜಿಲ್ಲೆಯ ಚಿನ್ನದ ಗಣಿ, ನೀರು. ಕೃಷಿ ಸಮಸ್ಯೆ ಬಗ್ಗೆ ಅವರು ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ’ ಎಂದು ಕಿಡಿಕಾರಿದರು.</p>.<p>ಭಗತ್ ಸೇನೆ ಪಧಾಧಿಕಾರಿಗಳಾದ ರುದ್ರಪ್ಪ, ಪಟೇಲ್, ಲೋಕೇಶ್, ನಾಗರಾಜ್, ನಿಶಾಂತ್, ಮಂಜುನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>