ಬೆಂಗಳೂರು: ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಲೋಕಸಭೆಯ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದ್ದು, ಲಭ್ಯ ಮಾಹಿತಿ ಪ್ರಕಾರ 296 ನಾಮಪತ್ರಗಳು ಸಲ್ಲಿಕೆಯಾಗಿವೆ.
ಬೆಳಗಾವಿ ಜಿಲ್ಲೆಯಲ್ಲಿ ಅತೀ ಹೆಚ್ಚು 33 ನಾಮಪತ್ರ ಸಲ್ಲಿಕೆಯಾಗಿದ್ದರೆ, ರಾಯಚೂರಿನಲ್ಲಿ ಅತೀ ಕಡಿಮೆ 4 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿ ಸಲ್ಲಿಕೆಯಾದ ನಾಮಪತ್ರಗಳ ಸಂಪೂರ್ಣ ಮಾಹಿತಿ ಸಿಗಬೇಕಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ನಾಮಪತ್ರಗಳ ಪರಿಶೀಲನೆ ಶುಕ್ರವಾರ ನಡೆಯಲಿದ್ದು, ವಾಪಸು ಪಡೆಯಲು ಸೋಮವಾರ (ಏ. 8) ಕೊನೆ ದಿನ.