ಹಾಸನ ಕ್ಷೇತ್ರದ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ನನ್ನನ್ನು ಏನನ್ನೂ ಕೇಳಬೇಡಿ, ಇದನ್ನು ಕುಮಾರಸ್ವಾಮಿ ಅವರು ನೋಡಿಕೊಳ್ಳುತ್ತಾರೆ. ಪಕ್ಷದ ವರಿಷ್ಠರು ಇದರ ತೀರ್ಮಾನ ಮಾಡುತ್ತಾರೆ. ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ರಾಮನಗರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ ಎನ್ನುವುದು ಕೇವಲ ಮಾಧ್ಯಮಗಳ ಸೃಷ್ಟಿ. ಈ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.