<p><strong>ಕೋಲಾರ</strong>: ಕೊತ್ತೂರು ಮಂಜುನಾಥ್ ಒತ್ತಡಕ್ಕೆ ಮಣಿದು 12 ಗಂಟೆಯಲ್ಲಿ ಹೈಕಮಾಂಡ್ ಮುಳಬಾಗಿಲು ಮೀಸಲು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬದಲಾಯಿಸಿದೆ.</p>.<p>ಬುಧವಾರ ರಾತ್ರಿ 8.30ರ ಸುಮಾರಿಗೆ ಡಾ.ಮುದ್ದು ಗಂಗಾಧರ್ ಎಂಬುವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಲಾಗಿತ್ತು. </p>.<p>ಇದರಿಂದ ಕೋಪಗೊಂಡ ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್, 'ಮುದ್ದು ಗಂಗಾಧರ್ ಯಾರೆಂಬುದೇ ಕ್ಷೇತ್ರದ ಜನರಿಗೆ ಗೊತ್ತಿಲ್ಲ. ಅಭ್ಯರ್ಥಿ ಬದಲಾಯಿಸದಿದ್ದರೆ ಕೋಲಾರದಲ್ಲಿ ನಾಮಪತ್ರ ಸಲ್ಲಿಸುವುದಿಲ್ಲ' ಎಂದು ಪಟ್ಟು ಹಿಡಿದರು ಎಂಬುದು ಗೊತ್ತಾಗಿದೆ. </p>.<p>ಹೀಗಾಗಿ, ಬೆಳಿಗ್ಗೆ ಡಾ.ಮುದ್ದುಗಂಗಾಧರ್ ಬದಲಿಗೆ ಆದಿನಾರಾಯಣ ಎಂಬುವರಿಗೆ ಟಿಕೆಟ್ ಘೋಷಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿ ಫಾರಂ ನೀಡಿದ್ದಾರೆ.</p>.<p>ಆದಿನಾರಾಯಣ ಅವರು ಕೊತ್ತೂರು ಬೆಂಬಲಿಗ. ಈ ಕಾರಣಕ್ಕೆ ಗುರುವಾರ ಕೋಲಾರದಲ್ಲಿ ನಾಮಪತ್ರ ಸಲ್ಲಿಸಿದ ಕೊತ್ತೂರು, ಮುಳಬಾಗಿಲಿಗೆ ತೆರಳಿ ಆದಿನಾರಾಯಣ ನಾಮಪತ್ರ ಸಲ್ಲಿಕೆಗೆ ಸಹಕರಿಸಿದರು.</p>.<p>ಇದಕ್ಕೂ ಮುನ್ನ ಮುಳಬಾಗಿಲು ಅಭ್ಯರ್ಥಿ ಬದಲಾವಣೆ ಬಗ್ಗೆ 'ಪ್ರಜಾವಾಣಿ'' ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೊತ್ತೂರು, 'ಈ ಹಿಂದೆ ಟಿಕೆಟ್ ಪಡೆದಿರುವ ಮನುಷ್ಯ ಯಾರೆಂಬುದೇ ನನಗೆ ಗೊತ್ತಿಲ್ಲ. ಈಗ ಬದಲಾವಣೆ ಮಾಡಿದ್ದಾರೆ' ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಕೊತ್ತೂರು ಮಂಜುನಾಥ್ ಒತ್ತಡಕ್ಕೆ ಮಣಿದು 12 ಗಂಟೆಯಲ್ಲಿ ಹೈಕಮಾಂಡ್ ಮುಳಬಾಗಿಲು ಮೀಸಲು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬದಲಾಯಿಸಿದೆ.</p>.<p>ಬುಧವಾರ ರಾತ್ರಿ 8.30ರ ಸುಮಾರಿಗೆ ಡಾ.ಮುದ್ದು ಗಂಗಾಧರ್ ಎಂಬುವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಲಾಗಿತ್ತು. </p>.<p>ಇದರಿಂದ ಕೋಪಗೊಂಡ ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್, 'ಮುದ್ದು ಗಂಗಾಧರ್ ಯಾರೆಂಬುದೇ ಕ್ಷೇತ್ರದ ಜನರಿಗೆ ಗೊತ್ತಿಲ್ಲ. ಅಭ್ಯರ್ಥಿ ಬದಲಾಯಿಸದಿದ್ದರೆ ಕೋಲಾರದಲ್ಲಿ ನಾಮಪತ್ರ ಸಲ್ಲಿಸುವುದಿಲ್ಲ' ಎಂದು ಪಟ್ಟು ಹಿಡಿದರು ಎಂಬುದು ಗೊತ್ತಾಗಿದೆ. </p>.<p>ಹೀಗಾಗಿ, ಬೆಳಿಗ್ಗೆ ಡಾ.ಮುದ್ದುಗಂಗಾಧರ್ ಬದಲಿಗೆ ಆದಿನಾರಾಯಣ ಎಂಬುವರಿಗೆ ಟಿಕೆಟ್ ಘೋಷಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿ ಫಾರಂ ನೀಡಿದ್ದಾರೆ.</p>.<p>ಆದಿನಾರಾಯಣ ಅವರು ಕೊತ್ತೂರು ಬೆಂಬಲಿಗ. ಈ ಕಾರಣಕ್ಕೆ ಗುರುವಾರ ಕೋಲಾರದಲ್ಲಿ ನಾಮಪತ್ರ ಸಲ್ಲಿಸಿದ ಕೊತ್ತೂರು, ಮುಳಬಾಗಿಲಿಗೆ ತೆರಳಿ ಆದಿನಾರಾಯಣ ನಾಮಪತ್ರ ಸಲ್ಲಿಕೆಗೆ ಸಹಕರಿಸಿದರು.</p>.<p>ಇದಕ್ಕೂ ಮುನ್ನ ಮುಳಬಾಗಿಲು ಅಭ್ಯರ್ಥಿ ಬದಲಾವಣೆ ಬಗ್ಗೆ 'ಪ್ರಜಾವಾಣಿ'' ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೊತ್ತೂರು, 'ಈ ಹಿಂದೆ ಟಿಕೆಟ್ ಪಡೆದಿರುವ ಮನುಷ್ಯ ಯಾರೆಂಬುದೇ ನನಗೆ ಗೊತ್ತಿಲ್ಲ. ಈಗ ಬದಲಾವಣೆ ಮಾಡಿದ್ದಾರೆ' ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>